ಮನೆ ಸುದ್ದಿ ಜಾಲ ಜೂ. 20 ರಂದು ಪ್ರಧಾನಿ ಮೋದಿ ಜೊತೆ ಸಂವಾದ: ಬಿ.ಸಿ.ಪ್ರಕಾಶ್

ಜೂ. 20 ರಂದು ಪ್ರಧಾನಿ ಮೋದಿ ಜೊತೆ ಸಂವಾದ: ಬಿ.ಸಿ.ಪ್ರಕಾಶ್

0

ಮೈಸೂರು (Mysuru): ಇದೇ ತಿಂಗಳ ಜೂನ್ 20 ರಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದಿರುವ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.

ಈ ಬಗ್ಗೆ ಪ್ರಾದೇಶಿಕ ಆಯುಕ್ತರಾದ ಬಿ.ಸಿ.ಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಜೂ.20 ರಂದು 3.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬರು ಯಾವುದಾದರೂ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಚಾಮರಾಜನಗರ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆದುಕೊಂಡು ಬರಬೇಕು. ಇಲಾಖಾವಾರು ಫಲಾನುಭವಿಗಳನ್ನು ಆಯ್ಕೆ ಮಾಡಿ ಕರೆದುಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಬಗಾದಿ ಗೌತಮ್, ಹಾಸನ ಜಿಲ್ಲಾಧಿಕಾರಿಗಳಾದ ಗಿರೀಶ್, ಮಂಡ್ಯ ಜಿಲ್ಲಾಧಿಕಾರಿಗಳಾದ ಅಶ್ವತಿ, ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಚಾರುಲತ ಸೋಮಲ್ ಸೇರಿದಂತೆ ನಾಲ್ಕು ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಶೇ.20 ರಷ್ಟು ಮಕ್ಕಳು ಬಾಲ ಕಾರ್ಮಿಕರಾಗಿದ್ದಾರೆ: ದೇವರಾಜ್ ಭೂತೆ
ಮುಂದಿನ ಲೇಖನಬಾಲ ಕಾರ್ಮಿಕ ಪದ್ಧತಿ ಈಗಲೂ ಸಮಸ್ಯೆ: ಎಂ.ಎಲ್.ರಘುನಾಥ್