ಹರಿಯಾಣ: ಪೊಲೀಸರಿಗಾಗಿ ಪ್ರಸ್ತಾಪಿಸಲಾಗುತ್ತಿರುವ ಒಂದು ರಾಷ್ಟ್ರ, ಒಂದು ಸಮವಸ್ತ್ರ ಕೇವಲ ಕಲ್ಪನೆ ಮಾತ್ರ. ನಾನು ಅದನ್ನು ನಿಮ್ಮ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ. ಸ್ವಲ್ಪ ಯೋಚಿಸಿ. ಇದು ಆಗಬಹುದಾದಂಥದ್ದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಹರಿಯಾಣದಲ್ಲಿ ನಡೆಯುತ್ತಿರುವ ರಾಜ್ಯಗಳ ಗೃಹ ಮಂತ್ರಿಗಳ ‘ಚಿಂತನ ಶಿಬಿರ’ ಉದ್ದೇಶಿಸಿ ಮಾತನಾಡಿದ ಮೋದಿ, ಆದರೆ, ಇದು ಕೇವಲ ಸಲಹೆ ಎಂದಿರುವ ಅವರು, ರಾಜ್ಯಗಳ ಮೇಲೆ ಈ ಕಲ್ಪನೆಯನ್ನು ಹೇರಲು ಯತ್ನಿಸುವುದಿಲ್ಲ. 5 ವರ್ಷ, ಇಲ್ಲವೇ 50, ಅಥವಾ 100 ವರ್ಷಗಳಲ್ಲಿ ಆಗಬಹುದಾದಂಥದ್ದು. ಸ್ವಲ್ಪ ಯೋಚಿಸಿ ಎಂದು ಹೇಳಿದರು.
ಅಪರಾಧ ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರದ ಅಗತ್ಯವಿದೆ. ಸಹಕಾರ ಒಕ್ಕೂಟವು ಸಂವಿಧಾನದ ಆಶಯ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಕಾನೂನು–ಸುವ್ಯವಸ್ಥೆ ಮತ್ತು ಭದ್ರತೆಯ ಸವಾಲುಗಳನ್ನು ಎದುರಿಸಲು ಎಲ್ಲಾ ಏಜೆನ್ಸಿಗಳ ಸಂಘಟಿತ ಪ್ರಯತ್ನಕ್ಕೆ ಅವರು ಮನವಿ ಮಾಡಿದರು.
ಅಲ್ಲದೇ, ಹಳೆಯ ಕಾನೂನುಗಳನ್ನು ಪರಿಶೀಲಿಸಬೇಕಾಗಿಯೂ, ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕಾಗಿಯೂ ಅವರು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.
ಪೊಲೀಸರ ಬಗ್ಗೆ ಉತ್ತಮ ಗ್ರಹಿಕೆ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಮತ್ತು ಸಮಸ್ಯೆಗಳು ಪರಿಹಾರವಾಗಬೇಕು ಎಂದು ಮೋದಿ ಇದೇ ವೇಳೆ ಸಲಹೆ ನೀಡಿದರು.
ದಕ್ಷತೆ, ಉತ್ತಮ ಫಲಿತಾಂಶ ಮತ್ತು ಸಾಮಾನ್ಯ ಜನರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ಪರಸ್ಪರ ಸಹಕಾರ ಹೊಂದಿರಬೇಕು ಎಂದು ಅವರು ಸಲಹೆ ನೀಡಿದರು.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.