ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
EPF ವಿಚಾರದಲ್ಲಿ ಬದಲಾವಣೆ.
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಪ್ರಶಸ್ತಿ ಸಿಕ್ಕಿದೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ…
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮುದ್ದೇಬಿಹಾಳ: ಜೀವಾವಧಿ ಶಿಕ್ಷೆಗೊಳಗಾಗಿದ್ದ ಖೈದಿಯೊಬ್ಬ ಪರೋಲ್ ಮೇಲೆ ಹೊರ ಬಂದು ಮರಳಿ ಕೇಂದ್ರ ಕಾರಾಗೃಹಕ್ಕೆ ಹೋಗಿ ಶರಣಾಗದೆ ತಲೆಮರೆಸಿಕೊಂಡಿದ್ದು, ಈತನ ಸುಳಿವು ನೀಡಿದವರಿಗೆ ಜಿಲ್ಲಾ ಎಸ್ಪಿ ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.
ತಾಲೂಕಿನ ಮುದ್ನಾಳದ ರಮೇಶ ಯಮನಪ್ಪ ಪರಪ್ಪಗೋಳ ತಲೆಮರೆಸಿಕೊಂಡ ಖೈದಿ.
ಎಸ್.ಸಿ.ನಂಬರ್ 81/2008ರ ಪ್ರಕರಣವೊಂದರಲ್ಲಿ ವಿಜಯಪುರದ ಒಂದನೇ ತ್ವರಿತ ನ್ಯಾಯಾಲಯದ ನ್ಯಾಯಾಧೀಶರು ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರು.
ವಿಜಯಪುರದ ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿ ಅಪರಾಧಿಯಾಗಿದ್ದ. 2017ರ ಆಗಸ್ಟ್ 16 ರಂದು ಪರೋಲ್ ರಜೆಯ ಮೇಲೆ ತನ್ನ ಸ್ವಂತ ಊರು ಮುದ್ನಾಳ ಗ್ರಾಮಕ್ಕೆ ಬಂದಿದ್ದು, ಸೆಪ್ಟೆಂಬರ್ 16 ರಂದು ಪರೋಲ್ ರಜೆ ಅವಧಿ ಮುಗಿದು ಕೇಂದ್ರ ಕಾರಾಗೃಹಕ್ಕೆ ಹಾಜರಾಗಿ ಶರಣಾಗಬೇಕಿತ್ತು. ಆದರೆ ಆತ ಹಾಗೆ ಮಾಡದೆ ಅಂದಿನಿಂದಲೇ ತಲೆಮರೆಸಿಕೊಂಡಿದ್ದಾನೆ.
ಭಾವಚಿತ್ರದಲ್ಲಿರುವ ಅಪರಾಧಿಯ ಸುಳಿವು ನೀಡಿದರೆ ಅವರಿಗೆ ಲಕ್ಷ ರೂ. ನಗದು ಬಹುಮಾನ ನೀಡಲಾಗುತ್ತದೆ. ಈತನ ಸುಳಿವು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು, ಇಲ್ಲವೇ ಪೊಲೀಸ್ ಕಂಟ್ರೋಲ್ ರೂಂ ಸಂಪರ್ಕಿಸಬೇಕು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ