ಮನೆ ಅಪರಾಧ ಖಾಸಗಿ ಶಾಲಾ ಬಸ್ ಅಪಘಾತ: ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು

ಖಾಸಗಿ ಶಾಲಾ ಬಸ್ ಅಪಘಾತ: ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು

0

ರಾಮನಗರ(Ramnagar): ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ 25ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಮಾಗಡಿ ತಾಲೂಕಿನ ಕುದೂರು ಹೋಬಳಿಯ ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ವಿದ್ಯಾಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಗಾಯಗೂಂಡ ಮಕ್ಕಳನ್ನು ಕುದೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುದೂರು ಪೂಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದಿನ ಲೇಖನಮಹಾರಾಜ ಟ್ರೋಫಿ ಕೆಎಸ್ ಸಿಎ ಟಿ-20 ಟೂರ್ನಿ ಉದ್ಘಾಟಿಸಿದ ನಟ ಸುದೀಪ್
ಮುಂದಿನ ಲೇಖನಆಪ್ ಸೇರಿದ ಹಾಸ್ಯ ನಟ ಟೆನ್ನಿಸ್ ಕೃಷ್ಣ