ಮನೆ ರಾಜ್ಯ ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ

ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ

0

ಮೈಸೂರು: ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು, ಮ-ನರೇಗಾ ಯೋಜನೆಯಡಿಯಲ್ಲಿ ಕಡಿಮೆ ಮಾನವ ದಿನಗಳನ್ನು ಸಾಧಿಸಿರುವ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಮಾನವ ದಿನಗಳನ್ನು ಸಾಧಿಸಲು ಸೂಚನೆ ನೀಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಪ್ರಗತಿ, ಶಿಶುಪಾಲನಾ ಕೇಂದ್ರ ಪ್ರಗತಿ, ಸಾಮಾಜಿಕ ಪರಿಶೋಧನೆ ಪ್ರಗತಿ, ಸ್ವ ಸಹಾಯ ಸಂಘಗಳ ವರ್ಕ್ ಶೆಡ್, ಮಹಿಳಾ ಭಾಗವಹಿಸುವಿಕೆ ಹಾಗೂ ಸ್ವಚ್ಛ ಭಾರತ್ ಅಭಿಯಾನ, ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ, ಘನತ್ಯಾಜ್ಯ ವಿಲೇವಾರಿ – ಘಟಕಗಳ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಮತ್ತು ಕಸ ಸಂಗ್ರಹಣೆ ಪ್ರಾರಂಭಿಸಿರುವ ಕುರಿತು ಚರ್ಚಿಸಿದರು.

ಜಲಜೀವನ್ ಮಿಷನ್/ಕುಡಿಯುವ ನೀರು ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ತುರ್ತು ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು.

ತೆರಿಗೆ ಪರಿಷ್ಕರಣೆ, ತೆರಿಗೆ ವಸೂಲಾತಿ, ಡಿಜಿಟಲ್ ಗ್ರಂಥಾಲಯ, ಪಂಚತಂತ್ರ ಡಿಸಿಬಿ ಪ್ರಗತಿ, ಸಕಾಲ ಯೋಜನೆ, ಸರ್ಕಾರಿ ಸಿಬ್ಬಂಧಿ/ಗ್ರಾ.ಪಂ ಇ-ಹಾಜರಾತಿ ಪ್ರಗತಿ, ಆಸ್ತಿ ಸಮೀಕ್ಷೆ ಹಾಗೂ 14 ಮತ್ತು 15ನೇ ಹಣಕಾಸಿನ ಪ್ರಗತಿ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಉಪಕಾರ್ಯದರ್ಶಿ(ಆಡಳಿತ) ಸವಿತಾ, ಉಪಕಾರ್ಯದರ್ಶಿ(ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು

  • ಟ್ಯಾಗ್ಗಳು
  • Mysore
ಹಿಂದಿನ ಲೇಖನಅರ್ಹ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ
ಮುಂದಿನ ಲೇಖನಕುರಿ ಮೇಯಿಸುವ ವೇಳೆ ರೈತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರಾದ ರೈತ