ಮೈಸೂರು: ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು, ಮ-ನರೇಗಾ ಯೋಜನೆಯಡಿಯಲ್ಲಿ ಕಡಿಮೆ ಮಾನವ ದಿನಗಳನ್ನು ಸಾಧಿಸಿರುವ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಮಾನವ ದಿನಗಳನ್ನು ಸಾಧಿಸಲು ಸೂಚನೆ ನೀಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಪ್ರಗತಿ, ಶಿಶುಪಾಲನಾ ಕೇಂದ್ರ ಪ್ರಗತಿ, ಸಾಮಾಜಿಕ ಪರಿಶೋಧನೆ ಪ್ರಗತಿ, ಸ್ವ ಸಹಾಯ ಸಂಘಗಳ ವರ್ಕ್ ಶೆಡ್, ಮಹಿಳಾ ಭಾಗವಹಿಸುವಿಕೆ ಹಾಗೂ ಸ್ವಚ್ಛ ಭಾರತ್ ಅಭಿಯಾನ, ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ, ಘನತ್ಯಾಜ್ಯ ವಿಲೇವಾರಿ – ಘಟಕಗಳ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಮತ್ತು ಕಸ ಸಂಗ್ರಹಣೆ ಪ್ರಾರಂಭಿಸಿರುವ ಕುರಿತು ಚರ್ಚಿಸಿದರು.
ಜಲಜೀವನ್ ಮಿಷನ್/ಕುಡಿಯುವ ನೀರು ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ತುರ್ತು ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸೇರಿದಂತೆ ಇತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು.
ತೆರಿಗೆ ಪರಿಷ್ಕರಣೆ, ತೆರಿಗೆ ವಸೂಲಾತಿ, ಡಿಜಿಟಲ್ ಗ್ರಂಥಾಲಯ, ಪಂಚತಂತ್ರ ಡಿಸಿಬಿ ಪ್ರಗತಿ, ಸಕಾಲ ಯೋಜನೆ, ಸರ್ಕಾರಿ ಸಿಬ್ಬಂಧಿ/ಗ್ರಾ.ಪಂ ಇ-ಹಾಜರಾತಿ ಪ್ರಗತಿ, ಆಸ್ತಿ ಸಮೀಕ್ಷೆ ಹಾಗೂ 14 ಮತ್ತು 15ನೇ ಹಣಕಾಸಿನ ಪ್ರಗತಿ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಉಪಕಾರ್ಯದರ್ಶಿ(ಆಡಳಿತ) ಸವಿತಾ, ಉಪಕಾರ್ಯದರ್ಶಿ(ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.