ವಿದೇಶದಲ್ಲಿರುವ ತನ್ನ ಮಗಳನ್ನು ಗಲ್ಲು ಶಿಕ್ಷೆಯಿಂದ ಪಾರು ಮಾಡುವುದಕ್ಕಾಗಿ ಮೃತನ ಕುಟುಂಬಕ್ಕೆ ಪರಿಹಾರ ಧನ ಒದಗಿಸುವುದಕ್ಕಾಗಿ ಯೆಮೆನ್ ಗೆ ತೆರಳಲು ಅನುಮತಿ ನೀಡುವಂತೆ ಕೇರಳ ಮೂಲದ ಅಪರಾಧಿ ನಿಮಿಷಾ ಪ್ರಿಯಾ ಅವರ ತಾಯಿ ಮಾಡಿದ್ದ ಮನವಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಈ ಸಂಬಂಧ ಕೇಂದ್ರದಿಂದ ಸೂಚನೆಗಳನ್ನು ಪಡೆಯಲು ತಮಗೆ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ಕೇಂದ್ರ ಸರ್ಕಾರದ ಪರ ವಕೀಲರು ಕೋರಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸುಬ್ರಮೊಣಿಯಂ ಪ್ರಸಾದ್ ಅವರು ಪ್ರಕರಣವನ್ನು ನವೆಂಬರ್ 16ಕ್ಕೆ ಮುಂದೂಡಿದರು.
ಯೆಮೆನ್ಗೆ ತೆರಳಲು ಇರುವ ನಿಷೇಧದ ಹೊರತಾಗಿಯೂ ಅಲ್ಲಿಗೆ ಪ್ರಯಾಣಿಸಲು ನಿಮಿಷಾಳ ತಾಯಿ ಪ್ರೇಮಕುಮಾರಿ ಅವರು ನಿರ್ದೇಶನ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದಾರೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹದಿ ಹತ್ಯೆ ಪ್ರಕರಣದಲ್ಲಿ ಯೆಮೆನ್ ನಲ್ಲಿ ಶುಶ್ರೂಷಕಿಯಾಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಮಹಿಳೆ ನಿಮಿಷಾ ಪ್ರಿಯಾಗೆ ಮರಣದಂಡನೆ ವಿಧಿಸಲಾಗಿದೆ.
ಗಲ್ಲು ಶಿಕ್ಷೆಯಿಂದ ನಿಮಿಷಾ ಅವರ ತಾಯಿ ಪ್ರೇಮಕುಮಾರಿ ಅವರ ಮಗಳನ್ನು ಪಾರು ಮಾಡು ಏಕೈಕ ಮಾರ್ಗವೆಂದರೆ ಮೃತರ ಕುಟುಂಬಕ್ಕೆ ಪರಿಹಾರ ಧನ ಒದಗಿಸಿ ಅವರೊಂದಿಗೆ ಮಾತಕತೆ ನಡೆಸುವುದಾಗಿದೆ. ಆ ಉದ್ದೇಶಕ್ಕಾಗಿ ಪ್ರೇಮಕುಮಾರಿ ಯೆಮೆನ್ಗೆ ತೆರಳಬೇಕಿದೆ. ಪ್ರಯಾಣ ನಿಷೇಧ ಇರುವ ಕಾರಣ ಅರ್ಜಿದಾರರು ಯೆಮೆನ್ಗೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರೇಮಕುಮಾರಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಪ್ರಕರಣದಲ್ಲಿ ರಾಜತಾಂತ್ರಿಕ ಮಧ್ಯಸ್ಥಿಕೆ ಕೋರಿ ಕಳೆದ ವರ್ಷ, ʼನಿಮಿಷಾ ಪ್ರಿಯಾ ಉಳಿಸಿ ಅಂತಾರಾಷ್ಟ್ರೀಯ ಕಾರ್ಯಚೂಚಿ ಮಂಡಳಿʼ ಕೂಡ ನ್ಯಾಯಾಲಯವನ್ನು ಸಂಪರ್ಕಿಸಿತ್ತು. ಆಗ ಯೆಮೆನ್ ಕಾನೂನು ಪ್ರಕಾರ ಮೇಲ್ಮನವಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು.
ಕುಟುಂಬ ಉದ್ದೇಶಿಸಿರುವ ಯಾವುದೇ ರಾಜಿ ಮಾತುಕತೆಗಳಲ್ಲಿ ಪಕ್ಷಕಾರನಾಗುವಂತೆ ಕೇಂದ್ರ ಸರ್ಕಾರಕ್ಕೆ ತಾನು ಆದೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಆದರೂ ಸಮನ್ವಯ ಪೀಠ ಆ ಆದೇಶದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಕುಟುಂಬದ ಪ್ರಯಾಣಕ್ಕೆ ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಅಗತ್ಯವಿದ್ದರೆ ಅವರಿಗೆ ದುಭಾಷಿಗಳನ್ನು ಒದಗಿಸುವಂತೆ ಸೂಚಿಸಿತ್ತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.