ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ವಲಯ ವ್ಯಾಪ್ತಿಯ ಖಾಸಗಿ ಜಮೀನಿನಲ್ಲಿ ವಿದ್ಯುತ್ ಆಘಾತದಿಂದ ಅಸ್ವಸ್ಥಗೊಂಡಿದ್ದ ಹೆಣ್ಣು ಕಾಡಾನೆಗೆ ಚಿಕಿತ್ಸೆಗೆ ನೀಡಿ, ಅದನ್ನು ರಕ್ಷಿಸಿದ ಬಂಡೀಪುರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ಆನೆ ರಕ್ಷಣೆ ಕಾರ್ಯಾಚರಣೆಯ ವಿಡಿಯೊ ಮತ್ತು ಫೋಟೊಗಳನ್ನು ಶನಿವಾರ ರಾತ್ರಿ ಟ್ವೀಟ್ ಮಾಡಿರುವ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯ ಕ್ಷಿಪ್ರ ಪ್ರಯತ್ನದಿಂದ ಜೀವನ್ಮರಣ ಸ್ಥಿತಿಯಲ್ಲಿದ್ದ ಆನೆಯ ಜೀವವನ್ನು ಉಳಿಸಲು ಸಾಧ್ಯವಾಗಿರುವುದಕ್ಕೆ ಸಂತಸವಾಗಿದೆ. ಹೆಣ್ಣಾನೆಯನ್ನು ವಾಪಸ್ ಕಾಡಿಗೆ ಬಿಡಲಾಗಿದ್ದು, ಅದರ ಮೇಲೆ ನಿಗಾ ಇಡಲಾಗಿದೆ. ನಮ್ಮ ಅರಣ್ಯದ ಮುಂಚೂಣಿ ನೌಕರರು ನಮ್ಮ ಹೆಮ್ಮೆ ಎಂದು ಹೇಳಿದ್ದಾರೆ.
ಶನಿವಾರ ಬೆಳಿಗ್ಗೆ ಪ್ರಧಾನಿ ಮೋದಿ ಅವರು ಸಚಿವರ ಟ್ವೀಟ್ ಹಂಚಿಕೊಂಡು, ಬಂಡೀಪುರ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದನ್ನು ನೋಡಿ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಇರುವುದು ಶ್ಲಾಘನೀಯ ಎಂದು ಟ್ವೀಟ್’ನಲ್ಲಿ ತಿಳಿಸಿದ್ದಾರೆ.
ತಂತಿ ಬೇಲಿಯನ್ನು ಸ್ಪರ್ಶಿಸಿದ್ದ 25ರಿಂದ 30 ವರ್ಷದ ಹೆಣ್ಣಾನೆ ತೀವ್ರ ನಿತ್ರಾಣಗೊಂಡು ಅಸ್ವಸ್ಥಗೊಂಡಿತ್ತು. ಬಂಡೀಪುರದ ಪಶುವೈದ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿ ಪ್ರಯತ್ನದಿಂದ ಆನೆ ಚೇತರಿಸಿಕೊಂಡಿದೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.