ಮನೆ ರಾಜ್ಯ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಮುಖಂಡ ಸಾವು

ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಮುಖಂಡ ಸಾವು

0

ಪಾಟ್ನಾ:  ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಬಿಹಾರ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪಾಟ್ನಾ ಪೊಲೀಸರು ನಡೆಸಿದ ಲಾಠಿಚಾರ್ಜ್‌ ನಲ್ಲಿ ಬಿಜೆಪಿ ಮುಖಂಡನೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

Join Our Whatsapp Group

ನಗರದ ದಾಕ್ಬಾಂಗ್ಲಾ ಚೌರಾಹಾ ಪ್ರದೇಶದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರ ಲಾಠಿಚಾರ್ಜ್‌ ನಲ್ಲಿ ಲಾಠಿಚಾರ್ಜ್‌ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್‌ ಕುಮಾರ್‌ ಸಿಂಗ್‌ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸಿಂಗ್‌ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು.

ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ ವಿಧಾನಸಭಾ ಚಲೋ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಈ ಲಾಠಿಚಾರ್ಜ್‌ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದರು.

ಘಟನೆ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಟ್ವೀಟ್‌ ಮಾಡಿದ್ದು, ಬಿಹಾರ ಸರ್ಕಾರದ ಅಸಮರ್ಥತೆ ಪರಿಣಾಮ ಎಂಬಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಪ್ರಹಾರ ನಡೆಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಹಿಂದಿನ ಲೇಖನ‘ಹಾಯ್​ ನಾನ್ನ’: ನಾನಿ ನಟನೆಯ 30ನೇ ಸಿನಿಮಾದ ಶೀರ್ಷಿಕೆ ಬಿಡುಗಡೆ
ಮುಂದಿನ ಲೇಖನಮೊದಲ ದಿನದ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್  ಪಡೆದು ಮಿಂಚಿದ ಆರ್.ಅಶ್ವಿನ್