ಮೈಸೂರು: ಮೈಸೂರು ತಾಲೂಕಿನ ತಾಲೂಕು ಉಸ್ತುವಾರಿ ಅಧಿಕಾರಿ ಹಾಗೂ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆಗಿರುವ ಡಾ.ಪಿ. ಶಿವರಾಜು ರವರು ತಾಲೂಕಿನ ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗಾಗಿ ಹಾಗೂ ರೋಗಿಗಳಿಗೆ ಸರ್ಕಾರಿ ಸೇವೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಯಿತು.
ಪರಿಶೀಲನೆ ಸಮಯದಲ್ಲಿ ಹಾಜರಿದ್ದ ರೋಗಿಗಳು ಮತ್ತು ಅವರ ಕುಟುಂಬದವರ ಜೊತೆ ಚರ್ಚೆ ನಡೆಸಲಾಯಿತು.ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ ಮತ್ತು ಉಪಚಾರ ಮತ್ತು ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡುವಂತೆ ನಿರ್ದೇಶನ ನೀಡಲಾಯಿತು.
ಈ ಸಂದರ್ಭದಲ್ಲಿ ಟಿ ಹೆಚ್ ಓ ಡಾ. ಪುಟ್ಟತಾಯಮ್ಮ ಹಾಗು ವೈದ್ಯರು ಹಾಜರಿದ್ದರು.