ಮನೆ ಅಪರಾಧ ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ: ಬಿಜೆಪಿ ನಾಯಕಿಯ ಪತಿ ಅರೆಸ್ಟ್

ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ: ಬಿಜೆಪಿ ನಾಯಕಿಯ ಪತಿ ಅರೆಸ್ಟ್

0

ಕಲ್ಬುರ್ಗಿ: ನೇಮಕಾತಿಯಲ್ಲಿ ಅಕ್ರಮ ಸಂಬಂಧ ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಎಂಬವರನ್ನು ಸಿಐಡಿ ಪೊಲೀಸರು  ಬಂಧಿಸಿದ್ದಾರೆ.

ಸದ್ಯ ರಾಜೇಶ್ ಅವರನ್ನ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪಿಎಸ್ ನೇಮಕಾತಿ ಅಕ್ರಮಕ್ಕೆ ಕಾರಣವಾದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾಗಿದ್ದಾರೆ.

ಪ್ರಕರಣ ಸಂಬಂಧ ಸಿಐಡಿ ದಿವ್ಯಾ ಹಾಗರಗಿ ಮನೆ ಮೇಲೆ ಭಾನುವಾರ ದಾಳಿ ನಡೆಸಿ ಶೋಧ ನಡೆಸಿದ್ದರು. ಆ ವೇಳೆ ದಿವ್ಯಾ ಹಾಗರಗಿ ಮನೆಯಲ್ಲಿ ಇರಲಿಲ್ಲ.

ಕಳೆದ ನಾಲ್ಕು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ. ಇನ್ನು ಮನೆಯಲ್ಲಿ ಸಿಐಡಿ ಪೊಲೀಸರು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಸದ್ಯ ರಾಜೇಶ್ ನ್ಯಾಯಾಂಗ ಬಂಧನದಲ್ಲಿದ್ದು,  ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಿಎಸ್ ನೇಮಕಾತಿ ಪ್ರಕರಣದಲ್ಲಿ ಇದುವರೆಗೂ ಎಂಟು ಜನರ ಬಂಧನವಾಗಿದೆ.

ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಬಳಿಗೆ ಹೋಗಲು ಯಾವುದೇ ಸಚಿವರಿಗೂ ತಾಕತ್ತಿಲ್ಲ. ಇವರ 40 ಪರ್ಸಂಟೇಜ್ ವಿಚಾರದಲ್ಲಿ ಅಭ್ಯರ್ಥಿಗಳ ಭವಿಷ್ಯ ಹಾಳಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿಯ ಪದಾಧಿಕಾರಿಗಳೇ ಈ ಭ್ರಷ್ಟಾಚಾರ ದಲ್ಲಿ ಪಾಲ್ಗೊಂಡಿದಾರೆ. ಅವರನ್ನು ಈ 40% ಸರ್ಕಾರ ಕಾಪಾಡುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸರಿಯಾಗಿ ತನಿಖೆ ನಡೆದರೆ ಎರಡು ವಿಕೆಟ್ ಬೀಳುತ್ತವೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಿದರೆ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತದೆ. ಆಗ ಅನಿವಾರ್ಯವಾಗಿ ವಿಧಾನಸಭೆ ವಿಸರ್ಜನೆ ಮಾಡಬೇಕಾಗುತ್ತದೆ ಎಂದರು.

ಹಿಂದಿನ ಲೇಖನಮೇಲ್ಮನವಿ ನಿರ್ಧರಿಸುವಲ್ಲಿ ವಿಳಂಬವಾದದ್ದಕ್ಕೆ ಶಿಕ್ಷೆ ಕಡಿಮೆಗೊಳಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಮುಂದಿನ ಲೇಖನಈಜುಕೂಟ: ನಟ ಮಾಧವನ್ ಪುತ್ರ ವೇದಾಂತ್‌ಗೆ ಚಿನ್ನ, ಬೆಳ್ಳಿ