ಮನೆ ರಾಜ್ಯ ಚಿತ್ರದುರ್ಗದ ಮುರುಘಾ ಮಠದ ಟ್ರಸ್ಟ್‌ ಮತ್ತು ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿಯಾಗಿ ಪಿ.ಎಸ್‌.ವಸ್ತ್ರದ್‌ ನೇಮಕ

ಚಿತ್ರದುರ್ಗದ ಮುರುಘಾ ಮಠದ ಟ್ರಸ್ಟ್‌ ಮತ್ತು ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿಯಾಗಿ ಪಿ.ಎಸ್‌.ವಸ್ತ್ರದ್‌ ನೇಮಕ

0

ಬೆಂಗಳೂರು(Bengaluru): ಚಿತ್ರದುರ್ಗದ ಮುರುಘಾ ಮಠದ ಟ್ರಸ್ಟ್‌ ಮತ್ತು ಶಿಕ್ಷಣ ಸಂಸ್ಥೆಗೆ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಅವರು ನ್ಯಾಯಂಗ ಬಂಧನದಲ್ಲಿ ಇರುವ ಹಿನ್ನೆಲೆಯಲ್ಲಿ ಟ್ರಸ್ಟ್‌ ಮತ್ತು ಶಿಕ್ಷಣ ಸಂಸ್ಥೆಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಒತ್ತಾಯ ಕೇಳಿ ಬಂದಿತ್ತು.

ಈ ಸಂಬಂಧ ರಾಜ್ಯ ಸರ್ಕಾರ ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯ ಕೋರಿದಾಗ, ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಟ್ರಸ್ಟಿನ ಸ್ವತ್ತು ರಕ್ಷಿಸುವ ಉದ್ದೇಶದಿಂದ ಸಂವಿಧಾನದ ಅನುಚ್ಛೇದ162 ರ ಅನ್ವಯ ಸರ್ಕಾರ ಆಡಳಿತಾಧಿಕಾರಿ ನೇಮಿಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಹಿಂದಿನ ಲೇಖನಗಡಿ ಭಾಗದ ಸಮಗ್ರ ಅಭಿವೃದ್ಧಿ ನಮ್ಮ ಹೊಣೆ: ಡಾ. ಸಿ ಸೋಮಶೇಖರ್
ಮುಂದಿನ ಲೇಖನಹಾಸನ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ- ಮೂವರ ಬಂಧನ