ಮನೆ ಅಪರಾಧ ಪಿಎಸ್ಐ ನೇಮಕಾತಿ ಅಕ್ರಮ: ತನಿಖಾ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದ ಸಚಿವ ಆರಗ ಜ್ಞಾನೇಂದ್ರ

ಪಿಎಸ್ಐ ನೇಮಕಾತಿ ಅಕ್ರಮ: ತನಿಖಾ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದ ಸಚಿವ ಆರಗ ಜ್ಞಾನೇಂದ್ರ

0

ಶಿವಮೊಗ್ಗ(Shivamogga): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆಯಲ್ಲಿ ಸಾಕ್ಷ್ಯಾಧಾರಗಳು ಸಿಗುವವರೆಗೂ ಯಾರನ್ನೂ ಮುಟ್ಟುವುದಿಲ್ಲ. ಸರಿಯಾದ ಸಾಕ್ಷ್ಯಾಧಾರಗಳು ದೊರೆತರೆ ಯಾರನ್ನೂ ಬಿಡೊಲ್ಲ. ದೊಡ್ಡ ದೊಡ್ಡ ಪೊಲೀಸ್ ಅಧಿಕಾರಿಗಳನ್ನು ಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದರು.

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯ ವಿಚಾರದಲ್ಲಿ ಸಿಐಡಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಬೇರೆ ಬೇರೆಯವರು ಒತ್ತಡ ಹಾಕಬಹುದು. ಯಾವುದಕ್ಕೂ ಸೊಪ್ಪು ಹಾಕುವುದಿಲ್ಲ. ತನಿಖೆ ಮುಂದುವರೆಯಲಿದೆ. ಪರೀಕ್ಷೆಯಲ್ಲಿ ಅಕ್ರಮ ಮಾಡುವವರು ಎದೆಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹಣವಿದ್ದರೆ ಮಾತ್ರ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗುತ್ತೇವೆ ಎಂಬ ನಂಬಿಕೆಯನ್ನು ಪಾರದರ್ಶಕ ತನಿಖೆಯ ಮೂಲಕ ಹೋಗಲಾಡಿಸಲಿದ್ದೇವೆ ಎಂದು ಜ್ಞಾನೇಂದ್ರ ಭರವಸೆ ನೀಡಿದರು.

ಹಿಂದಿನ ಲೇಖನಚಾಮರಾಜನಗರದ ಹುಂಡಿಪುರ ಗ್ರಾಮದಲ್ಲಿ ಸ್ಮಾರ್ಟ್‌, ಡಿಜಿಟಲ್ ಗ್ರಂಥಾಲಯ ಸ್ಥಾಪನೆ
ಮುಂದಿನ ಲೇಖನಬಿಬಿಎಂಪಿ ವಾರ್ಡ್ ಗಳ ಮರುವಿಂಗಡಣೆ: ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ