ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಪೊಲೀಸ್ ಸಬ್ ಇನ್’ಸ್ಪೆಕ್ಟರ್ (ಪಿಎಸ್’ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯಲ್ಲಿ ಬಂಧಿತರಾಗಿರುವ ಇಬ್ಬರು ಅಭ್ಯರ್ಥಿಗಳಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಸ್ ಜಾಗೃತ್ ಮತ್ತು 17ನೇ ಆರೋಪಿಯಾಗಿರುವ ರಚನಾ ಹನುಮಂತ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಬೆಂಗಳೂರಿನ 23ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ ಲಕ್ಷ್ಮಿನಾರಾಯಣ್ ಭಟ್ ಅವರು ಮಾನ್ಯ ಮಾಡಿದ್ದಾರೆ.
ಸೆಪ್ಟೆಂಬರ್ 14ರಂದು ಜಾಗೃತ್ ಮತ್ತು ಅಕ್ಟೋಬರ್ 27ರಂದು ರಚನಾ ಅವರ ಪರವಾಗಿ ವಕೀಲೆ ಡಾ. ವಂದನಾ ಪಿ ಎಲ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹಿರಿಯ ವಕೀಲ ಎಂ ಎಸ್ ಶ್ಯಾಮಸುಂದರ್ ಅವರು ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದರು. ಸಿಐಡಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್ ವಾದಿಸಿದ್ದರು.
ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ ನರಸಿಂಹ ಮೂರ್ತಿ ಅವರ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 120B (ಕ್ರಿಮಿನಲ್ ಪಿತೂರಿ), 420 (ವಂಚನೆ), 465 (ನಕಲು), 468 (ವಂಚನೆಗೆ ವಿದ್ಯುನ್ಮಾನ ಸಾಧನ ಬಳಕೆ), 471 (ನಕಲಿ ದಾಖಲೆಯನ್ನು ನೈಜ ಎಂದು ಬಿಂಬಿಸುವುದು) ಜೊತೆಗೆ 34ರ (ಹಲವು ಕೃತ್ಯಗಳಲ್ಲಿ ಭಾಗಿ) ಅಡಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಏಪ್ರಿಲ್ 30ರಂದು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಇಲ್ಲಿ ಜಾಗೃತ್ ಅವರನ್ನು ಮೊದಲ ಆರೋಪಿಯನ್ನಾಗಿಸಿದ್ದು, ರಚನಾ 17ನೇ ಆರೋಪಿಯಾಗಿದ್ದಾರೆ.
ಜುಲೈ 2ರಂದು ಜಾಗೃತ್ ಅವರನ್ನು, ಆಗಸ್ಟ್ 28ರಂದು ರಚನಾ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಪಿಎಸ್ಐ ನೇಮಕಾತಿ ಪಟ್ಟಿಯಲ್ಲಿ ಜಾಗೃತ್ ನಾಲ್ಕನೇ ರ್ಯಾಂಕ್ ಪಡೆದಿದ್ದು, ಮಹಿಳಾ ವಿಭಾಗದಲ್ಲಿ ರಚನಾ ಅವರು ಮೊದಲ ರ್ಯಾಂಕ್ ಪಡೆದಿದ್ದರು.
ರಚನಾ ಮತ್ತು ಜಾಗೃತ್ ಜಾಮೀನು ಅರ್ಜಿಗಳನ್ನು ವಿಚಾರಣಾಧೀನ ನ್ಯಾಯಾಲಯ ಮತ್ತು ಹೈಕೋರ್ಟ್ ಈ ಹಿಂದೆ ತಿರಸ್ಕರಿಸಿದ್ದವು.
ಪ್ರಕರಣದ ಹಿನ್ನೆಲೆ: 2021ರ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಕಲಬುರ್ಗಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆ ರಾಜ್ಯ ಸರ್ಕಾರವು ಪ್ರಕರಣವು ಸಿಐಡಿ ತನಿಖೆಗೆ ವಹಿಸಿತ್ತು.
ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಮಧ್ಯಂತರ ವರದಿ ಸಲ್ಲಿಸಿತ್ತು. ನೇಮಕಾತಿಯಲ್ಲಿ ಅಕ್ರಮ, ನ್ಯಾಯಯೋಚಿತವಾಗಿ ನೇಮಕಾತಿ ನಡೆಸದಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ. ಹೀಗಾಗಿ, ಅರ್ಹರಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ವಿವರಿಸಿತ್ತು.
ಕಲಬುರ್ಗಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ 11 ಅಭ್ಯರ್ಥಿಗಳ ಪೈಕಿ 8 ಮಂದಿ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಅಭ್ಯರ್ಥಿಗಳು, ಶಾಲಾ ಸಿಬ್ಬಂದಿ, ವ್ಯವಸ್ಥಾಪಕರು, ಏಜೆಂಟ್’ಗಳು ಹಾಗೂ ಹಲವರ ಸಹಕಾರದಿಂದ ಪರೀಕ್ಷಾ ಪ್ರಕ್ರಿಯೆಯನ್ನು ದುರ್ಬಲಗೊಳಿಸಿರುವುದು ಸಿಐಡಿ ವಿಚಾರಣೆ ಹಾಗೂ ತನಿಖೆಯಿಂದ ಗೊತ್ತಾಗಿದೆ. ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ರೀತಿಯಲ್ಲಿಯೇ ಇತರೆ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿರುವುದನ್ನು ತಳ್ಳಿಹಾಕಲಾಗದು ಎಂದೂ ಸರ್ಕಾರದ ಆದೇಶದಲ್ಲಿ ವಿವರಿಸಲಾಗಿತ್ತು.
ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ಬರೆದು ಆಯ್ಕೆಯಾಗಿರುವ 22 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ಸಂದೇಹಾಸ್ಪದವಾಗಿವೆ. ಇದರ ಜೊತೆಗೆ ಹೆಚ್ಚಿನ ಸಂಖ್ಯೆಯ ಒಎಂಆರ್ ಅಸಲಿ ಹಾಗೂ ಕಾರ್ಬನ್ ಪ್ರತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸಿಐಡಿ ವರದಿಯಲ್ಲಿ ಹೇಳಿತ್ತು. ಆನಂತರ ತನಿಖೆಯಲ್ಲಿ ಇಡೀ ಹಗರಣ ಬೆಳಕಿಗೆ ಬಂದಿತ್ತು.