ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ರಾಜಕೀಯ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ಪ್ರಕರಣದ ವಿಚಾರಣೆಯನ್ನ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ನಡೆಸುತ್ತಿದೆ. ರಾಜಕೀಯ ನಾಯಕರು ತಮ್ಮ ಬಳಿ ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣದ ಸಾಕ್ಷ್ಯಾಧಾರಗಳಿವೆ ಅಂತ ಹೇಳಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಸಾಕ್ಷ್ಯಾಧಾರಗಳನ್ನು ಒದಗಿಸಲು ಸೂಚಿಸುವಂತೆ ದೂರುದಾರರು ಮನವಿ ಮಾಡಿದ್ದರು.
ದೂರುದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ತನಿಖಾ ಆಯೋಗ, ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಸವರಾಜ ದಡೇಸೂರು, ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವತ್ಥ ನಾರಾಯಣ್, ಸತೀಶ್ ಜಾರಕಿಹೊಳಿ ಸೇರಿದಂತೆ ವಿವಿಧ ರಾಜಕೀಯ ನಾಯಕರಿಗೆ ಸಮನ್ಸ್ ಜಾರಿಗೊಳಿಸಿದೆ.
ನ್ಯಾಯಮೂರ್ತಿ ಬಿ.ವೀರಪ್ಪ ಅವರ ಆಯೋಗ ಜಾರಿಗೊಳಿಸಿರುವ ಸಮನ್ಸ್ ನಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಸಾಕ್ಷ್ಯಾಧಾರಗಳಿದ್ದರೇ ಒದಗಿಸುವಂತೆ ಸೂಚಿಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.