ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ಕಲಬುರಗಿಯಲ್ಲಿ ಆರ್.ಡಿ ಪಾಟೀಲ್, ಸಿಎಂ ಬೊಮ್ಮಾಯಿಗೆ ಸ್ವಾಗತಿಸುವ ಫ್ಲೆಕ್ಸ್ ಹಾಕಿದ್ದಾನೆ. ಈ ಮೂಲಕ ಆತನಿಗೆ ಬೊಮ್ಮಾಯಿ ಅವರ ಶ್ರೀರಕ್ಷೆ ಇದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಪಿಎಸ್’ಐ ನೇಮಕಾತಿ ಹಗರಣವನ್ನು ಪ್ರಸ್ತಾಪಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.
ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾನೆ. ಆತನಿಗೆ ಬಿಜೆಪಿ ಟಿಕೆಟ್ ನೀಡುವುದು ಖಚಿತವಿರಬಹುದು. ಆತ ಬಿಜೆಪಿಗರ ಹೆಸರು ಬಾಯಿ ಬಿಡದಿರುವುದಕ್ಕೆ ‘ಟಿಕೆಟ್’ ಉಡುಗೊರೆಯೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಪಿಎಸ್’ಐ ಹಗರಣದ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ₹3 ಕೋಟಿ ಕೇಳಿದ್ದರು, ನಾನು ₹76 ಲಕ್ಷ ಕೊಟ್ಟಿದ್ದೇನೆ ಎಂದು ಆರ್.ಡಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾನೆ. ಪ್ರಾಮಾಣಿಕ, ಪಾರದರ್ಶಕ ತನಿಖೆ ಎಂದು ಡೈಲಾಗ್ ಹೊಡೆದಿದ್ದ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಪಾರದರ್ಶಕತೆ ಇದೇನಾ? ಸರ್ಕಾರದ ತನಿಖೆಯಲ್ಲಿ ಸತ್ಯ ಸಮಾಧಿಯಾಗುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಪಿಎಸ್’ಐ ಹಗರಣದ ಪಾರದರ್ಶಕತೆ ಹೇಗಿದೆ ಎಂದು ಹಗರಣದ ಆರೋಪಿಯಿಂದಲೇ ಬೆತ್ತಲಾಗಿದೆ. ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದಾಗ ಪ್ರಾಮಾಣಿಕ ತನಿಖೆ ನಡೆಯುತ್ತಿದೆ ಎಂಬ ಸೋಗಲಾಡಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಐಡಿ ಅಧಿಕಾರಿಗಳ ₹3 ಕೋಟಿ ಡೀಲಿಂಗ್ ಬಗ್ಗೆ ಈಗ ಮಾತಾಡುತ್ತಿಲ್ಲವೇಕೆ? ಎಂದು ಕಾಂಗ್ರೆಸ್ ಕುಟುಕಿದೆ.