ಮನೆ ರಾಜ್ಯ ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ – ಪುಷ್ಪಾ ದೂರು

ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ – ಪುಷ್ಪಾ ದೂರು

0

ಬೆಂಗಳೂರು : ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಹಿನ್ನೆಲೆ ನಟ ಯಶ್ ತಾಯಿ ಪುಷ್ಪಾ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ವರ್ಣಗೌರಿ ಹಾಗೂ ಪಿಆರ್‌ಒ ಹರೀಶ್ ಸೇರಿ ನಾಲ್ಕು ಮಂದಿಯ ವಿರುದ್ಧ ದೂರು ನೀಡಲಾಗಿದೆ.

ಕಳೆದ ಒಂದು ವಾರದ ಹಿಂದೆ ಕೊಟ್ಟಿರುವ ದೂರು ತಡವಾಗಿ ಬೆಳಕಿಗೆ ಬಂದಿದ್ದು, ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಮಾಡಿ ಕೊಟ್ಟ ಹಣ ಸರಿಯಾಗಿ ಉಪಯೋಗ ಪಡಿಸಿಕೊಂಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಎ1 ಹರೀಶ್ ಅರಸು, ಎ2 ಮನು, ಎ3 ನಿತಿನ್, ಎ4 ಮಹೇಶ್ ಗುರು, ಎ5 ಸ್ವರ್ಣಗೌರಿ ವಿರುದ್ಧ ದೂರು ನೀಡಲಾಗಿದೆ. ಸ್ವರ್ಣಗೌರಿಗೆ ಹೈಗ್ರೌಂಡ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.