ಮನೆ ರಾಜ್ಯ ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ: ಭಗೀರಥ ಉಪ್ಪಾರ ಸಂಘ

ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ: ಭಗೀರಥ ಉಪ್ಪಾರ ಸಂಘ

0

ಮೈಸೂರು:ಚಾಮರಾಜನಗರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಎಸ್.ಯೋಗೀಶ ಉಪ್ಪಾರ ಒತ್ತಾಯಿಸಿದರು.

Join Our Whatsapp Group

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಾದ್ಯಂತ ಸುಮಾರು 30 ಲಕ್ಷ ಮತದಾರರಿರುವ ಉಪ್ಪಾರ ಸಮುದಾಯವು ಸಾಮಾಜಿಕವಾಗಿ ತೀರಾ ಹಿಂದುಳಿದಿದೆ. ಸಮಾಜದ ಏಕೈಕ ಶಾಸಕರಾಗಿ ಪುಟ್ಟರಂಗಶೆಟ್ಟಿ ಆಯ್ಕೆಯಾಗಿದ್ದು, ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಉಪ್ಪಾರ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡಲಿಲ್ಲ. ನಾವೆಲ್ಲರೂ ಒಮ್ಮತದಿಂದ ಸಿದ್ದರಾಮಯ್ಯ ಅವರ ನೇತೃತ್ವ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ. ಸಮಾಜದ ಮುಂಚೂಣಿ ನಾಯಕರನ್ನು ಗುರುತಿಸಿ ವಿಧಾನ ಪರಿಷತ್ ಸದಸ್ಯ ಸ್ಥಾನ ಹಾಗೂ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯಾಧ್ಯಕ್ಷ ಕನಕನಗರ ಮಹದೇವು, ಉಪಾಧ್ಯಕ್ಷ ಕರಳಾಪುರ ನಾಗರಾಜು, ಗೌರವ ಸಲಹೆಗಾರ ಚಂದ್ರಪ್ಪ, ನಿರ್ದೇಶಕರಾದ ಕುಡ್ಲಾಪುರ ಎಂ.ರಾಜು, ಮಲ್ಲೇಶ್, ಮುಖಂಡ ಸೋಮಶಂಕರ್ ಇದ್ದರು.

ಹಿಂದಿನ ಲೇಖನಎಸ್’ಟಿ ಪಟ್ಟಿಗೆ ಮೈತೇಯಿ ಸಮುದಾಯ ಸೇರ್ಪಡೆ: ತೀರ್ಪು ನೀಡಿದ್ದ ಮಣಿಪುರ ಹೈಕೋರ್ಟ್ ಗೆ ಸುಪ್ರೀಂ ತೀವ್ರ ತರಾಟೆ
ಮುಂದಿನ ಲೇಖನನಾಗರಹೊಳೆ: ರಾಷ್ಟ್ರೀಯ ಆನೆ ಗಣತಿಗೆ ಚಾಲನೆ