ಮನೆ ಅಪರಾಧ ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

0

ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಚಿನ್ನದ ಗಣಿಯಲ್ಲಿ ಗುರುವಾರ ತಡರಾತ್ರಿ ಮಣ್ಣು ಕುಸಿದ ಪರಿಣಾಮ ಕಾರ್ಮಿಕ ಮೃತಪಟ್ಟಿದ್ದಾರೆ.

Join Our Whatsapp Group

ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮಣ್ಣು ಕುಸಿದು ಕಾರ್ಮಿಕ ಮೌನೇಶ್ (48) ಸಾವಿಗೀಡಾಗಿದ್ದಾರೆ.

ಘಟನೆಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರ್ಮಿಕರು ಚಿನ್ನದ ಗಣಿಯ ಲಾಸ್ಟ್​ ಲೆವೆಲ್ ​ನಲ್ಲಿ ಕೆಲಸ ಮಾಡುತ್ತಿದ್ದರು.

ಹಟ್ಟಿ ಚಿನ್ನದ ಗಣಿಯ ಅಂಡರ್ ​ಗ್ರೌಂಡ್​ ನಲ್ಲಿ ಮಣ್ಣು ಕುಸಿದು ದುರಂತ ಸಂಭವಿಸಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.