ರಾಯಚೂರು(Raichuru): ರೈಲಿಗೆ ತಲೆ ಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು-ತೆಲಂಗಾಣ ಗಡಿ ಭಾಗದ ಕೃಷ್ಣ ರೈಲ್ವೆ ನಿಲ್ದಾಣ ಬಳಿ ನಡೆದಿದೆ.
ಆಂಧ್ರಪ್ರದೇಶ ಕರ್ನೂಲ್ ಮೂಲದ ಶಿವಕುಮಾರ್ (26) ಮತ್ತು ಅನಿತಾ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ಶಿವಕುಮಾರ್ ಮತ್ತು ಅನಿತಾ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬಸ್ಥರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ರೈಲಿಗೆ ತಲೆಕೊಟ್ಟು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಮೆಹಬೂಬನಗರ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ರೈಲು ಬರುವ ಸಮಯಕ್ಕೆ ಟ್ರ್ಯಾಕ್ ಮೇಲೆ ಪ್ರೇಮಿಗಳಿಬ್ಬರೂ ಮಲಗಿದ್ದರು. ಹೀಗಾಗಿ ಇಬ್ಬರ ಮೇಲೆ ಟ್ರೈನ್ ಹರಿದು ರುಂಡ-ಮುಂಡ ಪ್ರತ್ಯೇಕವಾಗಿದೆ.
ಈ ಬಗ್ಗೆ ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.