ಮನೆ ರಾಜ್ಯ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜು.19ರವರೆಗೆ ಮಳೆ

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜು.19ರವರೆಗೆ ಮಳೆ

0

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಸಿದ್ದಾಪುರ, ಸುಳ್ಯ, ಮಾಣಿ,ಮಂಕಿ, ಮಂಗಳೂರು, ಪುತ್ತೂರು, ಶಿವನಿ, ಶಿರಾಲಿ, ಕ್ಯಾಸಲ್​ ರಾಕ್, ಸರಗೂರು, ತುಮಕೂರು, ದಾವಣಗೆರೆ, ಕುಮಟಾ, ಮುಲ್ಕಿ, ಉಪ್ಪಿನಂಗಡಿ, ಧರ್ಮಸ್ಥಳ, ಬೆಳ್ತಂಗಡಿ, ಲಿಂಗನಮಕ್ಕಿ, ಭದ್ರಾವತಿ, ಬೆಂಗಳೂರು ನಗರ, ಬೆಳ್ಳೂರು, ಮದ್ದೂರು, ಚನ್ನಪಟ್ಟಣ, ಕೊಟ್ಟಿಗೆಹಾರ, ಎನ್ ​ಆರ್​ ಪುರ, ದಾವಣಗೆರೆ, ತಿಪಟೂರಿನಲ್ಲಿ ಮಳೆಯಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದೆ. ಮಧ್ಯಾಹ್ನದ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ.

ಹಿಂದಿನ ಲೇಖನಬ್ಯಾಂಕ್ ಆಫ್ ಮಹಾರಾಷ್ಟ್ರ: 414 ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ