ಮೈಸೂರು(Mysuru): ಸೆ.30ರಿಂದ ನಡೆಯುವ ರೈತ ದಸರೆಯಲ್ಲಿ ಇದೇ ಮೊದಲ ಬಾರಿಗೆ ಸಾಕುಪ್ರಾಣಿಗಳು ಆಗಮಿಸಲಿದ್ದು, ‘ಚಾರ್ಲಿ 777’ ಸಿನಿಮಾ ಖ್ಯಾತಿಯ ಶ್ವಾನ ಪ್ರಮುಖ ಆಕರ್ಷಣೆಯಾಗಿರಲಿದೆ.
ಇಂದು ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ರೈತ ದಸರಾ ಉಪಸಮಿತಿಯ ಕಾರ್ಯದರ್ಶಿ ಷಡಕ್ಷರಿ, ಮೈಸೂರು ವಿಶ್ವವಿದ್ಯಾಲಯದ ಸ್ಫೋಟ್ಸ್ ಪೆವಿಲಿಯನ್ ಹಾಕಿ ಮೈದಾನದಲ್ಲಿ ಸೆ.2ರಂದು ಬೆಳಿಗ್ಗೆ 10.30ಕ್ಕೆ ‘ಸಾಕು ಪ್ರಾಣಿಗಳ ಪ್ರದರ್ಶನ’ಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
‘ಚಾರ್ಲಿ 777’ ಜೊತೆ ತರಬೇತುದಾರ ಪ್ರಮೋದ್ ತಾರಾ ಮೆರಗು ನೀಡಲಿದ್ದಾರೆ. ‘ಸಂಜೆ 5.30ಕ್ಕೆ ವಿಜೇತ ಪ್ರಾಣಿಗಳ ಮಾಲೀಕರಿಗೆ ಬಹುಮಾನವನ್ನು ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ವಿತರಿಸಲಿದ್ದಾರೆ ಎಂದರು.
ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ: ಜೆ.ಕೆ. ಮೈದಾನದಲ್ಲಿ ಅ.1ರಂದು ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಸೆ.29ಕ್ಕೆ ರಾಜ್ಯದ ವಿವಿಧೆಡೆಯಿಂದ ಗೋವಿನ ಪಾಲಕರು ಹಸುಗಳೊಂದಿಗೆ ಆಗಮಿಸಲಿದ್ದಾರೆ. ಸೆ.30 ರಂದು ಹಸುಗಳಿಗೆ ವಿಶ್ರಾಂತಿ ಇದ್ದು, 1ರಂದು ಸ್ಪರ್ಧೆ ನಡೆಯಲಿದೆ ಎಂದು ಷಡಕ್ಷರಿ ಮಾಹಿತಿ ನೀಡಿದರು.
ಗೆದ್ದ ನಾಲ್ವರಿಗೆ ಕ್ರಮವಾಗಿ ₹50 ಸಾವಿರ, ₹40 ಸಾವಿರ, ₹30 ಸಾವಿರ ಹಾಗೂ ₹20 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.
ರೈತ ದಸರೆಯ ಉಪವಿಶೇಷಾಧಿಕಾರಿ ಡಾ.ಎಂ.ಕೃಷ್ಣರಾಜು, ಕಾರ್ಯಾಧ್ಯಕ್ಷ ಡಾ.ಬಿ.ಎಸ್.ಚಂದ್ರಶೇಖರ ಇದ್ದರು.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.