ಮನೆ ರಾಷ್ಟ್ರೀಯ ರಾಜಸ್ಥಾನ : ಕೃಷಿ ಸಚಿವ ಕಿರೋಡಿಲಾಲ್​ ಮೀನಾ ರಾಜೀನಾಮೆ

ರಾಜಸ್ಥಾನ : ಕೃಷಿ ಸಚಿವ ಕಿರೋಡಿಲಾಲ್​ ಮೀನಾ ರಾಜೀನಾಮೆ

0

ರಾಜಸ್ಥಾನದ ಕ್ಯಾಬಿನೆಟ್ ಸಚಿವ ಡಾ.ಕಿರೋಡಿಲಾಲ್ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Join Our Whatsapp Group

ಲೋಕಸಭೆ ಚುನಾವಣೆಯ ನಂತರ, ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದವು. ಇದೀಗ ಮೀನಾ ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಭಜನ್ ಲಾಲ್ ಅವರಿಗೆ ಕಳುಹಿಸಿದ್ದಾರೆ. ಚುನಾವಣಾ ಫಲಿತಾಂಶ ಬಂದ ಒಂದು ತಿಂಗಳ ನಂತರ ಅವರು ರಾಜೀನಾಮೆ ನೀಡಿದ್ದಾರೆ.

ಪೂರ್ವ ರಾಜಸ್ಥಾನಕ್ಕೆ ಸೇರಿದ ಮೀನಾ ಸಮುದಾಯದ ಹಿರಿಯ ನಾಯಕರಲ್ಲಿ ಡಾ. ಕಿರೋಡಿ ಲಾಲ್ ಮೀನಾ ಕೂಡ ಪ್ರಮುಖರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ರಚನೆಯಾದ ಬಿಜೆಪಿಯ ಭಜನ್ ಲಾಲ್ ಸರ್ಕಾರದಲ್ಲಿ ಅವರನ್ನು ಕೃಷಿ ಸಚಿವರನ್ನಾಗಿ ಮಾಡಲಾಯಿತು. ಆದರೆ, ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ, ತಮ್ಮ ಉಸ್ತುವಾರಿಯಲ್ಲಿರುವ ಏಳು ಸ್ಥಾನಗಳಲ್ಲಿ ಒಂದಾದರೂ ಬಿಜೆಪಿ ಸೋತರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭರವಸೆ ನೀಡಿದ್ದರು. ಈಗ ಪೂರ್ವ ರಾಜಸ್ಥಾನದಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ಅವರು ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯದ ದೌಸಾ, ಟೋಂಕ್-ಸವಾಯಿ ಮಾಧೋಪುರ್, ಭರತ್‌ಪುರ, ಭಿಲ್ವಾರಾ, ಕೋಟಾ-ಬುಂಡಿ, ಕರೌಲಿ-ಧೋಲ್‌ಪುರ್ ಮತ್ತು ಜೈಪುರ ಗ್ರಾಮಾಂತರ ಕ್ಷೇತ್ರಗಳು ಬಿಜೆಪಿ ನಾಯಕ ಕಿರೋಡಿ ಅವರ ಉಸ್ತುವಾರಿಯಲ್ಲಿದ್ದವು.

ಕಳೆದ ತಿಂಗಳು ಪ್ರಕಟವಾದ ಲೋಕಸಭೆಯ ಫಲಿತಾಂಶದಲ್ಲಿ ಬಿಜೆಪಿ 7 ರಲ್ಲಿ 4 ಸ್ಥಾನಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ಜೈಪುರ ಗ್ರಾಮಾಂತರ ಸಂಸದೀಯ ಸ್ಥಾನವನ್ನು ಬಿಜೆಪಿ ಕಠಿಣ ಹೋರಾಟದ ನಂತರ ಗೆಲ್ಲಲು ಸಾಧ್ಯವಾಯಿತು.

ಕಿರೋಡಿ ಲಾಲ್​ ಮೀನಾ ಎರಡು ಬಾರಿ ಸಂಸದರಾಗಿದ್ದರು. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅವರನ್ನು ಸವಾಯಿ ಮಾಧೋಪುರದಿಂದ ಕಣಕ್ಕಿಳಿಸಿತ್ತು.

ಹಿಂದಿನ ಲೇಖನಕೊಡಗು: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಕಾಡಾನೆ
ಮುಂದಿನ ಲೇಖನಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ: ಬಿಬಿಎಂಪಿ ಸ್ಪಷ್ಟನೆ