ಮನೆ ಸಾಹಿತ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ ಇನ್ನಿಲ್ಲ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ ಇನ್ನಿಲ್ಲ

0

ಚಾಮರಾಜನಗರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ, ಹಿರಿಯ ವಿದ್ವಾಂಸ ಪ್ರೊ.ಮಲೆಯೂರು ಗುರುಸ್ವಾಮಿ ಪ್ರೊ.ಮಲೆಯೂರು ಗುರುಸ್ವಾಮಿ(76) ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.

ಪ್ರೊ. ಮಲೆಯೂರು ಗುರುಸ್ವಾಮಿ ಅವರಿಗೆ ಅನಾರೊಗ್ಯ ಹಿನ್ನೆಲೆ ಕೆಲ ದಿನಗಳ ಹಿಂದೆ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಬಳಿ ಪ್ರೊ. ಮಲೆಯೂರು ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಚಾಮರಾಜನಗರ ತಾಲೂಕಿನ ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತ ಪ್ರೊ. ಮಲೆಯೂರು ಗುರುಸ್ವಾಮಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಹಿಂದಿನ ಲೇಖನಪತ್ನಿಗೆ ಮಾಸಿಕ ಜೀವನಾಂಶ ಜೊತೆಗೆ ವಸತಿ ಸೌಲಭ್ಯಕ್ಕೆ ಹೈಕೋರ್ಟ್ ಆದೇಶ
ಮುಂದಿನ ಲೇಖನಸಬ್ ಇನ್ಸ್ ಪೆಕ್ಟರ್ ಆಗಿ ಬಡ್ತಿ ಹೊಂದಿದ ಮಲ್ಲೇಶ್ ಅವರಿಗೆ ಅಭಿನಂದನೆ