ಮನೆ ರಾಜ್ಯ ರಾಮನಗರ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ಶಕ್ತಿ ಪ್ರದರ್ಶನ

ರಾಮನಗರ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ಶಕ್ತಿ ಪ್ರದರ್ಶನ

0

ರಾಮನಗರ: ಜಿಲ್ಲೆಯ ಚನ್ನಪಟ್ಟಣ ಹಾಗೂ ಕನಕಪುರದಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಗೆ ಶಕ್ತಿ ಪ್ರದರ್ಶನ ಮಾಡಿದರು.

Join Our Whatsapp Group

ಕನಕಪುರದಲ್ಲಿ ಸಚಿವ ಆರ್. ಅಶೋಕ್ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ಅವರಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವ ಅಶ್ವತ್ಥನಾರಾಯಣ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.

ಬಳಿಕ ತಹಶೀಲ್ದಾರ್ ಕಚೇರಿಯಲ್ಲಿ ಅವರು ಉಮೇದುವಾರಿಕೆ ಸಲ್ಲಿಸಿದರು. ಚನ್ನಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ನಾನಾ ದೇವಾಲಯಗಳಿಗೆ ಭೇಟಿ ಕೊಟ್ಟ ಸಿ.ಪಿ. ಯೋಗೇಶ್ವರ್ ಹೆದ್ದಾರಿಯಲ್ಲಿ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ಮಾಡಿದರು. ಬಳಿಕ ಸ್ಥಳೀಯ ಮುಖಂಡರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.

ಹಿಂದಿನ ಲೇಖನಮೈಸೂರು: ಪ್ರಚಾರಕ್ಕೆ ಬಂದ ವಿ.ಸೋಮಣ್ಣ, ಪ್ರತಾಪ್ ಸಿಂಹಗೆ ಸ್ಥಳೀಯರ ಕ್ಲಾಸ್
ಮುಂದಿನ ಲೇಖನSRH vs MI: ಟಾಸ್‌ ಸೋತ ಮುಂಬೈ ಬ್ಯಾಟಿಂಗ್‌