ಮನೆ ರಾಜಕೀಯ 600 ಕೋಟಿ ರೂ. ಹಗರಣದಲ್ಲಿ ರಮೇಶ್ ಜಾರಕಿಹೊಳಿ ಭಾಗಿ: ಎಂ.ಲಕ್ಷ್ಮಣ್

600 ಕೋಟಿ ರೂ. ಹಗರಣದಲ್ಲಿ ರಮೇಶ್ ಜಾರಕಿಹೊಳಿ ಭಾಗಿ: ಎಂ.ಲಕ್ಷ್ಮಣ್

0

ಮೈಸೂರು(Mysuru): ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಲವಾರು ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲವನ್ನು ಮರುಪಾವತಿ ಮಾಡದೇ ಸುಮಾರು 600 ಕೋಟಿ ರೂ.ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ(KPCC Spoke person) ಎಂ.ಲಕ್ಷ್ಮಣ್(M.Lakshman) ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ನಡೆಸುತ್ತಿರುವ ಜಾರಕಿಹೊಳಿ ಅವರು 15 ಅಪೆಕ್ಸ್ ಬ್ಯಾಂಕ್‌ಗಳಿಂದ 366 ಕೋಟಿ ರೂ., ಯೂನಿಯನ್ ಬ್ಯಾಂಕ್ ಮತ್ತು ಹರಿಯನ್ ಕೋಆಪರೇಟಿವ್ ಸೊಸೈಟಿಯಿಂದ ತಲಾ 20 ಕೋಟಿ ರೂ. ಸಾಲ ಪಡೆದುಕೊಂದಿದ್ದಾರೆ. ಸಾಲ ಪಡೆದಿರುವ ಅವರು, ಒಂದು ಪೈಸೆ ಸಾಲವನ್ನು ಮರುಪಾವತಿ ಮಾಡಿಲ್ಲ. ಏಪ್ರಿಲ್ 2017 ರಲ್ಲಿ ಕಂಪನಿಯನ್ನು ಅನುತ್ಪಾದಕ ಆಸ್ತಿ (NPA) ಎಂದು ಘೋಷಿಸಲಾಯಿತು.

ಕಂಪನಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನೋಟಿಸ್ ಜಾರಿ ಮಾಡಲಾಗಿತ್ತು, ಆದರೆ ಜಾರಕಿಹೊಳಿ ಧಾರವಾಡ ನ್ಯಾಯಾಲಯದ ಮೊರೆ ಹೋಗಿದ್ದರು. 2019 ರಲ್ಲಿ ಮಧ್ಯಂತರ ಆದೇಶವನ್ನು ನೀಡುವಾಗ ಸಾಲದ ಮೊತ್ತದ ಶೇಕಡಾ 50 ರಷ್ಟು ಮೊತ್ತವನ್ನು ಆರು ವಾರಗಳಲ್ಲಿ ಪಾವತಿಸಲು ನ್ಯಾಯಾಲಯವು ಅವರಿಗೆ ಸೂಚಿಸಿತು. ಸೌಭಾಗ್ಯಲಕ್ಷ್ಮಿ ಶುಗರ್ಸ್ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬೆಳ್ಳಿ ಪ್ರಕಾಶ್ ಅವರು ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಜಾರಕಿಹೊಳಿ ಅವರ ನಿಕಟವರ್ತಿ ಅಭಿನಂದನ್ ಪಾಟೀಲ್ ನಡೆಸುತ್ತಿರುವ ಹರಿಯನ್ ಸಹಕಾರಿ ಸೊಸೈಟಿಯು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಅನ್ನು ಸಂಪರ್ಕಿಸಿದೆ ಮತ್ತು ಕಂಪನಿಯನ್ನು ಹರಾಜು ಮಾಡಲು ದಿವಾಳಿತನ ಪರಿಹಾರ ಪ್ರಕ್ರಿಯೆ (ಐಆರ್‌ಸಿ) ಆದೇಶವನ್ನು ಪಡೆದುಕೊಂಡಿದೆ.

1,000 ಎಕರೆಗೂ ಹೆಚ್ಚು ಭೂಮಿಯನ್ನು ಹೊಂದಿರುವ ಕಂಪನಿಯು ಆಸ್ತಿಯನ್ನು ಕಡಿಮೆ ಮೌಲ್ಯಮಾಪನ ಮಾಡಿದೆ, ಆದರೆ ಅದರ ಮೌಲ್ಯವು 850 ಕೋಟಿ ರೂ. ಆಗಿದೆ. 610 ಕೋಟಿ ರೂ.ಗಳ ವ್ಯವಸ್ಥಿತ ಹಗರಣ ಇದಾಗಿದೆ. ಜಾರಕಿಹೊಳಿ ಉದ್ದೇಶಪೂರ್ವಕ ಸುಸ್ತಿದಾರನಾಗಿದ್ದಾರೆ. ಆದರೆ ಇನ್ನೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದ್ದಾರೆ.

ಹಿಂದಿನ ಲೇಖನಆ್ಯಸಿಡ್‌ ದಾಳಿಗೊಳಗಾದ ಸಂತ್ರಸ್ತ ಯುವತಿಗೆ ಪ್ಲಾಸ್ಟಿಕ್‌ ಸರ್ಜರಿ
ಮುಂದಿನ ಲೇಖನಇಂದಿನ ನಿಮ್ಮ ರಾಶಿ ಭವಿಷ್ಯ ಹೀಗಿದೆ