ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಸುಳಿವು ದೊರತಿದ್ದು, ತನಿಖೆಯನ್ನು ರಾಜ್ಯ ಸಿಸಿಬಿ ಹಾಗೂ ಎನ್ ಐಎ ತಂಡಗಳು ಜಂಟಿಯಾಗಿ ನಡೆಸುತ್ತಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಇಂದು ಸೈಬರ್ ಅಪರಾಧ ತನಿಖಾ ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು.
ಮಂಗಳವಾರ ಎನ್ ಐಎ ಅಧಿಕಾರಿಗಳ ತಂಡ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಆರಂಭಿಸಿದೆ. ರಾಜ್ಯ ಸಿಸಿಬಿ ಸಹ ತನಿಖೆಯಲ್ಲಿದ್ದಾರೆ. ಆದ್ದರಿಂದ ಎರಡೂ ತನಿಖಾ ಸಂಸ್ಥೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದರು.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಎಫ್ಎಸ್ಎಲ್ ವರದಿ ಆಧಾರದ ಮೇಲೆಯೇ ಮೂವರು ಆರೋಪಿತರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೆವು. ಈಗ ಬಂಧನ ಮಾಡಲಾಗಿದೆ, ತನಿಖೆ ನಡೆಯುತ್ತಿದೆ. ಬಿಜೆಪಿಯವರು ಅವರನ್ನು ಬಂಧಿಸಿ ಇವರನ್ನು ಬಂಧಿಸಿ ಎಂದು ಹೇಳುತ್ತಿದ್ದಾರೆ. ಅವರಿಗೆ ವಿರೋಧ ಪಕ್ಷವಾಗಿ ಮಾತನಾಡುವ ಹಕ್ಕಿದೆ, ಮಾತನಾಡಲಿ. ಆದರೆ ಸಾಕ್ಷ್ಯಾಧಾರಗಳಿಲ್ಲದೆ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ನನಗೂ ಸಹ ಬೆದರಿಕೆಯ ಇಮೇಲ್ ಗಳು ಬಂದಿವೆ. ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಇಂಥ ಬೆದರಿಕೆ ಮೇಲ್ಗಳು ಬಂದಿವೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಈ ರೀತಿಯ ಪ್ರಕರಣಗಳನ್ನು ಭೇದಿಸಲು ವಿದೇಶಿ ಏಜೆನ್ಸಿಗಳು, ಸಂಬಂಧಪಟ್ಟ ಕಂಪನಿಗಳ ಸಹಕಾರ ಅಗತ್ಯ. ಸಹಕಾರ ನೀಡಿದರೆ ಪ್ರಕರಣಗಳನ್ನು ಭೇದಿಸಬಹುದು ಎಂದರು.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.