ರಾಮನಗರ(Ramnagar): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ರಾಮನಗರ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರಾಮನಗರದ ಮಾರುತಿ ಬಡಾವಣೆಯಲ್ಲಿ ಭಕ್ಷಿ ಕೆರೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವುದನ್ನು ಗಮನಿಸಿದರು.
ನಂತರ ಸುಮಾರು ಅರ್ಧ ಕಿ.ಮೀ. ಮುಖ್ಯಮಂತ್ರಿಗಳು ರೈಲ್ವೆ ಟ್ರ್ಯಾಕ್ ಮೇಲೆ ಕಾಲ್ನಡಿಗೆಯಲ್ಲಿ ಹೋದರು. ಭಕ್ಷಿ ಕೆರೆ ಒಡೆದಿರುವ ಜಾಗದಿಂದ ರೈತರ ಮನೆಗೆ ಭೇಟಿ ಕೊಟ್ಟು ಪರಿಹಾರ ನೀಡುವ ಭರವಸೆ ನೀಡಿದರು.
ಬಿದ್ದಿರುವ ಮನೆಗಳಿಗೆ ತಕ್ಷಣ 1 ಲಕ್ಷ ರೂ. ಹಾಗೂ ಒಟ್ಟಾರೆ 5 ಲಕ್ಷ ರೂ. ಪರಿಹಾರವನ್ನು ಹಂತ ಹಂತವಾಗಿ ನೀಡಲಾಗುವುದು ಎಂದು ತಿಳಿಸಿದರು.
ಭಕ್ಷಿ ಕೆರೆಯನ್ನು ದುರಸ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಸಚಿವ ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಂಸದ ಡಿ.ಕೆ. ಸುರೇಶ, ಶಾಸಕಿ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.