ಮನೆ ಕ್ರೀಡೆ ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆ 122 ರನ್’ಗಳ ಗುರಿ

ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆ 122 ರನ್’ಗಳ ಗುರಿ

0

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ತಂಡವು ಜಯಗಳಿಸಲು 122 ರನ್‌’ಗಳ ಗುರಿಯನ್ನು ಛತ್ತೀಸಗಢ ತಂಡವು ನೀಡಿದೆ.

ಪಂದ್ಯದ ಕೊನೆಯ ದಿನವಾದ ಶುಕ್ರವಾರ ಛತ್ತೀಸಗಢ ತಂಡವು ಎರಡನೇ ಇನಿಂಗ್ಸ್‌’ನಲ್ಲಿ 77.5 ಓವರ್‌ಗಳಲ್ಲಿ 177 ರನ್ ಗಳಿಸಿತು. ಕರ್ನಾಟಕ ತಂಡವು ಮೊದಲ ಇನಿಂಗ್ಸ್‌’ನಲ್ಲಿ 55 ರನ್‌ಗಳ ಅಲ್ಪಮುನ್ನಡೆ ಸಾಧಿಸಿತ್ತು. ಮೂರನೇ ದಿನದಾಟದ ಕೊನೆಗೆ ಛತ್ತೀಸಗಢ ತಂಡವು ಎರಡು ವಿಕೆಟ್‌ಗಳಿಗೆ 35 ರನ್‌ ಗಳಿಸಿತ್ತು.

ಆದರೆ ಶುಕ್ರವಾರ ಕರ್ನಾಟಕದ ಮಧ್ಯಮವೇಗಿ ವೈಶಾಖ ವಿಜಯಕುಮಾರ್ (59ಕ್ಕೆ5) ಉತ್ತಮ ಬೌಲಿಂಗ್ ಮಾಡಿ ಛತ್ತೀಸಗಢ ತಂಡದ ಬ್ಯಾಟರ್‌’ಗಳಿಗೆ ಕಡಿವಾಣ ಹಾಕಿದರು.

ಪ್ರವಾಸಿ ತಂಡದ ಅಮನದೀಪ್ ಖರೆ (50; 111ಎ) ಮತ್ತು ಮಯಂಕ್ ವರ್ಮಾ (46; 128ಎ) ಅವರು ಇನಿಂಗ್ಸ್‌ ಬೆಳೆಸಲು ಪ್ರಯತ್ನಿಸಿದರು. ಆದರೆ, ಚಹಾ ವಿರಾಮಕ್ಕೆ ಇನ್ನೂ ಕೆಲವು ನಿಮಿಷಗಳು ಬಾಕಿಯಿರುವಾಗಲೇ ಛತ್ತೀಸಗಢ ಆಲೌಟ್ ಆಯಿತು.

ಕರ್ನಾಟಕದ ಆಫ್‌’ಸ್ಪಿನ್ನರ್ ಕೆ. ಗೌತಮ್ ಎರಡು, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಹಾಗೂ ವಿ. ಕೌಶಿಕ್ ತಲಾ ಒಂದು ವಿಕೆಟ್ ಗಳಿಸಿದರು.

ಹಿಂದಿನ ಲೇಖನಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರ ಸಾವು