ಮನೆ ಅಪರಾಧ ಬುದ್ದಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಎಎಸ್ ಐ ಅಪರಾಧಿ ಎಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ

ಬುದ್ದಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಎಎಸ್ ಐ ಅಪರಾಧಿ ಎಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ

0

ತುಮಕೂರು:  ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಎಸ್​ಐ ಉಮೇಶಯ್ಯ ಅಪರಾಧಿ ಎಂದು ತುಮಕೂರು ಸೆಷನ್ಸ್​  ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ತುಮಕೂರು ಗ್ರಾಮಾಂತರ ಠಾಣೆ ಎಎಸ್​ಐ ಆಗಿದ್ದ ಉಮೇಶಯ್ಯ 2017ರಲ್ಲಿ ತುಮಕೂರಿನ ಅಂತರಸನಹಳ್ಳಿ ಸೇತುವೆ ಬಳಿ ಬುದ್ದಿಮಾಂದ್ಯ ಯುವತಿಗೆ ಡ್ರಾಪ್​ ಕೊಡುವ ನೆಪದಲ್ಲಿ ಬೊಲೆರೊ ವಾಹನದಲ್ಲಿ . ಕರೆದೊಯ್ದು ಅತ್ಯಾಚಾರವೆಸಗಿದ್ದನು.

ಈ ಕುರಿತು ಸಂತ್ರಸ್ತೆಯ ಕುಟುಂಬಸ್ಥರು  ಪೊಲೀಸರಿಗೆ ದೂರು ನೀಡಿದ್ದರು. ಈ ಅತ್ಯಾಚಾರ ಪ್ರಕರಣದ ಸುದ್ಧಿ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿತ್ತು.  ಎಎಸ್​ಐ ಅತ್ಯಾಚಾರ ಪ್ರಕರಣದ ಕುರಿತು ಸರ್ಕಾರಿ ಅಭಿಯೋಜಕಿ ವಿ.ಎ.ಕವಿತಾ ವಾದ ಮಂಡಿಸಿದ್ದರು.

ಪ್ರಕರಣ ಸಂಬಂಧ ಎಎಸ್ ಐ ಉಮೇಶಯ್ಯ ಅಪರಾಧಿ ಎಂದು ಜಡ್ಜ್​ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ತೀರ್ಪು ಪ್ರಕಟಿಸಿದ್ದಾರೆ. 2ನೇ ಆರೋಪಿ ಖಾಸಗಿ ವಾಹನ ಚಾಲಕ ಈಶ್ವರನನ್ನು ಆರೋಪ ಮುಕ್ತಗೊಳಿಸಿ ಕೋರ್ಟ್ ಆದೇಶ ನೀಡಿದೆ. ಇದೇ ಜನವರಿ 31 ರಂದು ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟ ಮಾಡಲಿದೆ.

ಹಿಂದಿನ ಲೇಖನಗಾಂಧಿಧಾಮ್ ಪುರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ: ಪ್ರಯಾಣಿಕರು ಪಾರು
ಮುಂದಿನ ಲೇಖನವೇತನ ದ್ವಿಗುಣ; ಗ್ರಂಥಾಲಯ ಸಹಾಯಕರಿಂದ ರಾಕೇಶ್ ಸಿಂಗ್ ಗೆ ಅಭಿನಂದನೆ