ಮನೆ ರಾಜ್ಯ ಮೆದುಳು ನಿಷ್ಕ್ರಿಯಗೊಂಡ  ಯುವತಿ ಹೃದಯ ಸಾಗಾಣೆಗೆ ಕ್ಷಿಪ್ರ ತಯಾರಿ

ಮೆದುಳು ನಿಷ್ಕ್ರಿಯಗೊಂಡ  ಯುವತಿ ಹೃದಯ ಸಾಗಾಣೆಗೆ ಕ್ಷಿಪ್ರ ತಯಾರಿ

0

ಬೆಳಗಾವಿ(Belagavi): ಅಪಘಾತದಲ್ಲಿ ಗಾಯಗೊಂಡ ಯುವತಿಯ ಮಿದುಳು ನಿಷ್ಕ್ರಿಯಗೊಂಡ ಆಕೆಯ ಹೃದಯವನ್ನು ಧಾರವಾಡದಿಂದ ಬೆಳಗಾವಿಗೆ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಲು ಅಗತ್ಯ ಸಿದ್ಧತೆ ನಡೆಸಲಾಲಾಗಿದೆ.

ಸೋಮವಾರ ಸಂಜೆ 4ಕ್ಕೆ ಈ ಹೃದಯ ತರಲಾಗುತ್ತಿದೆ. ಅಪಘಾತದಿಂದ ಗಾಯಗೊಂಡ ಯುವತಿಯೊಬ್ಬರು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರ ಮಿದುಳು ನಿಷ್ಕ್ರಿಯವಾಗಿದ್ದು, ಹೃದಯ ಬಡಿದುಕೊಳ್ಳುತ್ತಿದೆ.

ಇದೇ ಕಾಲಕ್ಕೆ ಹೃದ್ರೋಗದಿಂದ ಬಳಲುತ್ತಿರುವ ಯುವಕ ಬೆಳಗಾವಿಯ ಕೆಎಲ್‌ಇಎಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಯುವಕನಿಗೆ ಹೃದಯ ಕಸಿ ಮಾಡಬೇಕಾಗಿದೆ. ಹೀಗಾಗಿ, ಧಾರವಾಡದ ಯುವತಿಯ ಹೃದಯವನ್ನೇ ಬೆಳಗಾವಿಯ ಯುವಕನಿಗೆ ಕಸಿ ಮಾಡಲು ಯುವತಿ ಪಾಲಕರು ಸಮ್ಮತಿಸಿದ್ದಾರೆ. ಹೀಗಾಗಿ ಧಾರವಾಡ- ಬೆಳಗಾವಿ ಮಧ್ಯೆ ಝೀರೊ ಟ್ರಾಫಿಕ್ ಮೂಲಕ ಹೃದಯವನ್ನು ತರಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ಹಿಂದಿನ ಲೇಖನಯೋಗದಿಂದ ಹೊಸ ಚೈತನ್ಯ: ಶಾಸಕ ಜಿ.ಟಿ.ದೇವೇಗೌಡ
ಮುಂದಿನ ಲೇಖನಕವಿತಾಳ: ಶಾಲಾ ಆವರಣದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ