ಮನೆ ಅಪರಾಧ ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆಗೈದು ಪೊಲೀಸರಿಗೆ ಶರಣಾದ ಸಂಬಂಧಿಕರು

ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆಗೈದು ಪೊಲೀಸರಿಗೆ ಶರಣಾದ ಸಂಬಂಧಿಕರು

0

ಚನ್ನಪಟ್ಟಣ: ಯುವಕನೊಬ್ಬನನ್ನು ಸಂಬಂಧಿಕರೇ ಸೇರಿ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ರಸ್ತೆ ಬದಿ ಬಿಸಾಕಿದ ಘಟನೆಯೊಂದು ತಾಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ದೊಡ್ಡನಹಳ್ಳಿ ಗ್ರಾಮದ ರಂಜಿತ್ ಕುಮಾರ್(29) ಕೊಲೆಯಾದ ಯುವಕ, ತನ್ನ ಜಮೀನಿನಲ್ಲಿ ಹುಲ್ಲು ಕೊಯ್ಯುವ ವಿಚಾರವಾಗಿ ಚಿಕ್ಕಪ್ಪ ನಾಗರಾಜು, ಮಂಗಳಮ್ಮ ಮತ್ತು ಅವರ ಮಗ ಸುನೀಲ್ ಕುಮಾರ್ ಸೋಮವಾರ (ಆಗಸ್ಟ್ 5) ಸಂಜೆ ರಂಜಿತ್ ಜೊತೆ ಗಲಾಟೆ ಮಾಡಿ ಬಳಿಕ ಮಚ್ಚಿನಿಂದ ತಲೆಗೆ ಹೊಡೆದು ಜಮೀನಿನಲ್ಲೇ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ರಸ್ತೆ ಬದಿಗೆ ಎಳೆದು ತಂದು ಹಾಕಿದ ದುಷ್ಕರ್ಮಿಗಳು ತಡ ರಾತ್ರಿ ಪೊಲೀಸರ ಬಳಿ ಹೋಗಿ ಶರಣಾಗಿ ಕೊಲೆ ಮಾಡಿರುವ ವಿಚಾರವನ್ನು ಒಪ್ಪಿಕೊಂಡಿದ್ದಾರೆ.

ಆರೋಪಿಗಳು ಪೊಲೀಸರ ವಶದಲ್ಲಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರು ಕೊಲೆ ನಡೆದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ತಂದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.