ಮನೆ ರಾಜಕೀಯ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ವಿಮುಕ್ತಿಗೊಳಿಸಿ: ಸಿಎಂಗೆ ಅಶೋಕ್ ಪತ್ರ

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ವಿಮುಕ್ತಿಗೊಳಿಸಿ: ಸಿಎಂಗೆ ಅಶೋಕ್ ಪತ್ರ

0

ಬೆಂಗಳೂರು: ತಮ್ಮನ್ನು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಂದಾಯ ಸಚಿವ ಆರ್. ಅಶೋಕ ಪತ್ರದ ಮೂಲಕ ಮನವಿ ಮಾಡಿದ್ದಾರೆ.

14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಅಶೋಕ, ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಹಾಗೂ ಕೆಂಪೇಗೌಡರ ಪುತ್ಥಳಿ ಸ್ಥಾಪಿಸುವ ಉದ್ದೇಶದಿಂದ ನೇಮಿಸಲಾಗಿರುವ ಸಮಿತಿಗೂ ಅಧ್ಯಕ್ಷರಾಗಿದ್ದಾರೆ.

ಕಂದಾಯ ಇಲಾಖೆ ಪ್ರಾರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕನಿಷ್ಠ ಎರಡು– ಮೂರು ಜಿಲ್ಲೆಗಳಲ್ಲಿ ತಾವು ವಾಸ್ತವ್ಯ ಹೂಡಬೇಕಾಗಿರುವುದರಿಂದ ಮಂಡ್ಯ ಉಸ್ತುವಾರಿ ಹೊಣೆ ನಿಭಾಯಿಸುವುದು ಹೊರೆಯಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಶೈವ, ವೈಷ್ಣವ, ಜೈನ ಕ್ಷೇತ್ರ ಅಡಗೂರು
ಮುಂದಿನ ಲೇಖನರಾಜಸ್ವ ಸಂಗ್ರಹಣೆಯಲ್ಲಿ ಶೇ. 91ರಷ್ಟು ಗುರಿ ಸಾಧನೆ: ರಾಜ್ಯಪಾಲ ಥಾವರಚಂದ್ ಗೆಹಲೋತ್