ಮನೆ ಕಾನೂನು ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

0

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಬಂಧಿಸಿ ನಟ ಚಿಕ್ಕಣ್ಣ ಬಸವೇಶ್ವರನಗರದಲ್ಲಿರುವ ತನಿಖಾಧಿಕಾರಿ ಮುಂದೆ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಣ್ಣ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದರು.

Join Our Whatsapp Group

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್  ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಭೇಟಿಗೆ ತೆರೆಳಿದ್ದ ನಟ ಚಿಕ್ಕಣ್ಣನ ಜೊತೆ ಈ ಸಂದರ್ಭದಲ್ಲಿ ಅಭಿಷೇಕ್ ಅಂಬರೀಶ್ , ಧನ್ವೀರ್ ಕೂಡ ಇದ್ದರು. ಅಲ್ಲಿ ದರ್ಶನ್ ಭೇಟಿ ಮಾಡಿ ಕೆಲಕಾಲ ಚಿಕ್ಕಣ್ಣ ಮಾತುಕತೆ ನಡೆಸಿದ್ದರು.

ನಟ ದರ್ಶನ್ ನನ್ನು ಭೇಟಿ ಮಾಡಿದ ಕಾರಣಕ್ಕಾಗಿ ಪೊಲೀಸರಿಂದ ಚಿಕ್ಕಣ್ಣಗೆ ನೊಟೀಸ್ ನೀಡಲಾಗಿತ್ತು.

ಪಾರ್ಟಿ ವಿಚಾರದಲ್ಲಿ ವಿಚಾರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೆಸ್ಟ್ ಆಗಿದ್ದ ನಟ ದರ್ಶನ್ ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ವಿಚಾರಣೆಗೆ ಒಳಪಡಿಸಲಾಗಿತ್ತು. ನಟ ಯಶಸ್‌ ಸೂರ್ಯ ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ನಟ ದರ್ಶನ್ ಜೊತೆ ಕೊಲೆಯ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ಮೂರು ಗಂಟೆಗಳ ಕಾಲ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ, ಅದೇ ದಿನ ತಾನು ದರ್ಶನ್ ಜೊತೆ ಪಾರ್ಟಿ ಮಾಡಿದ್ದು ನಿಜ ಎಂದು ಚಿಕ್ಕಣ್ಣ ಒಪ್ಪಿಕೊಂಡಿದ್ದರು.