ಮನೆ ಕಾನೂನು ರೇಣುಕಸ್ವಾಮಿ ಕೊಲೆ ಪ್ರಕರಣ: ಶೆಡ್‌ ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ- ವಕೀಲ

ರೇಣುಕಸ್ವಾಮಿ ಕೊಲೆ ಪ್ರಕರಣ: ಶೆಡ್‌ ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ- ವಕೀಲ

0

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಆರ್‌.ಆರ್‌. ನಗರದ ಪಟ್ಟಣಗೆರೆ ಶೆಡ್‌ನ‌ಲ್ಲಿ ನಡೆದಿದೆ ಎನ್ನುವುದಕ್ಕೆ ಸಾಕ್ಷಿಗಳ ಹೇಳಿಕೆಯಲ್ಲಿ ಒಂದೇ ಒಂದು ಪದ ಇಲ್ಲ. ಕೊಲೆಯ ಉದ್ದೇಶ ಮತ್ತು ಪಿತೂರಿಗೆ ಯಾವುದೇ ಸಾಕ್ಷಿ ಇಲ್ಲ. ಹೀಗಾಗಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಪ್ರಕರಣದ 11ನೇ ಆರೋಪಿ ಹಾಗೂ ನಟ ದರ್ಶನ್‌ ಅವರ ಮ್ಯಾನೇಜರ್‌ ನಾಗರಾಜು ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್‌ ಚೌಟ ಹೈಕೋರ್ಟ್‌ ಗೆ ಮನವಿ ಮಾಡಿದ್ದಾರೆ.

Join Our Whatsapp Group

ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ, ಆರ್‌. ನಾಗರಾಜು ಮತ್ತಿತರರು ಸಲ್ಲಿಸಿ ರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರವೂ ಮುಂದುವರಿಸಿತು.

ವಿಚಾರಣೆ ವೇಳೆ ನಟ ದರ್ಶನ್‌ ಅವರ ಮ್ಯಾನೇಜರ್‌ ಆರ್‌. ನಾಗರಾಜ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್‌ ಚೌಟ, ಘಟನೆ ನಡೆದಿರುವ ಕುರಿತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳಲ್ಲಿನ ದ್ವಂದ್ವಗಳು, ಎಫ್ ಐಆರ್‌ ದಾಖಲಿಸಲು ವಿಳಂಬ ಮಾಡಿರುವುದು, ರೇಣುಕಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆ ವಿಳಂಬವಾಗಿರುವುದು, ಕೊಲೆ ಪ್ರಕರಣದ ಪೂರ್ಣ ಮಾಹಿತಿಯು 132ನೇ ಸಾಕ್ಷಿಯಾಗಿರುವ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿನಯ್‌ ಅವರಿಗೆ ಇದ್ದರೂ, ಅವರನ್ನು ಬಿಟ್ಟು ಅಪಾರ್ಟ್‌ಮೆಂಟ್‌ನ ಭದ್ರತಾ ಸಿಬ್ಬಂದಿ ನರೇಂದ್ರಸಿಂಗ್‌ ದೂರು ಆಧರಿಸಿ ತಡವಾಗಿ ಎಫ್ಐಆರ್‌ ದಾಖಲಿಸಿ ರುವುದು ಸೇರಿದಂತೆ ಇಡೀ ಪ್ರಕರಣದಲ್ಲಿ ಆಗಿರುವ 11ಕ್ಕೂ ಹೆಚ್ಚು ವ್ಯತ್ಯಯಗಳನ್ನು ನ್ಯಾಯಾಲ ಯದ ಮುಂದೆ ಪಟ್ಟಿ ಮಾಡಿ ವಿವರಿಸಿದರು. ಒಂದು ಗಂಟೆ ಸಂದೇಶ್‌ ಚೌಟ ವಾದ ಮಂಡಿಸಿ, ಮುಕ್ತಾಯಗೊಳಿಸಿದರು.

ಪವಿತ್ರಾಗೌಡ ಸೇರಿ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಬೇಕಿರುವ ಹಿನ್ನೆಲೆಯಲ್ಲಿ ನ್ಯಾಯಪೀಠವು ವಿಚಾರಣೆ ಯನ್ನು ಡಿಸೆಂಬರ್‌ 3ಕ್ಕೆ ಮುಂದೂಡಿತು. ಗುರುವಾರ (ನ.28) ನಟ ದರ್ಶನ್‌ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ ವಾದ ಮುಕ್ತಾಯಗೊಳಿಸಿದ್ದರು. ಆರೋಪಿಗಳ ಪರ ವಕೀಲರ ವಾದ ಮುಗಿದ ಮೇಲೆ ಪ್ರಾಸಿಕ್ಯೂಷನ್‌ ಪರ ವಕೀಲರು ಪ್ರತಿವಾದ ಮಂಡಿಸಲಿದ್ದಾರೆ.