ಮನೆ ಅಪರಾಧ ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಇಂದು ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಇಂದು ವಿಚಾರಣೆ

0

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ 131 ದಿನಗಳ ಬಳಿಕ ಸೆರೆವಾಸದಿಂದ ಮುಕ್ತಿ ಪಡೆದಿರುವ ನಟ ದರ್ಶನ್​ಗೆ ಇಂದು ಬಿಗ್‌ ಡೇ ಆಗಿದೆ. ನಟ ದರ್ಶನ್ ಪವಿತ್ರಾ ಗೌಡ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.

ಅಲ್ಲದೇ ಬೆಂಗಳೂರು ಪೊಲೀಸರ ಮುಂದೆ ಕೋರ್ಟ್ ಎರಡು ಪ್ರಶ್ನೆ ಇಟ್ಟಿತ್ತು. ಕೊಲೆಯಲ್ಲಿ ದರ್ಶನ್‌ ನೇರ ಹಸ್ತಕ್ಷೇಪ ಅದಕ್ಕೆ ಪೂರಕವಾದ ಸಾಕ್ಷ್ಯಗಳ ಬಗ್ಗೆ ಮಾಹಿತಿ ಕೇಳಿತ್ತು. ಇಂದು ಈ ವಾದ ಮುಂದುವರಿಯಲಿದ್ದು ದರ್ಶನ್‌ ಪಾತ್ರದ ಬಗ್ಗೆ ಕೋರ್ಟ್‌ಗೆ ಇನ್ನಷ್ಟು ಮಾಹಿತಿಯನ್ನು ವಕೀಲರ ಮೂಲಕ ಪೊಲೀಸರು ನೀಡಲಿದ್ದಾರೆ.

ಇದಾದ ಬಳಿಕ ದರ್ಶನ ಪರ ವಕೀಲರು ವಾದ ಮಂಡಿಸಲಿದ್ದು ಬಳಿಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡಬೇಕೆ, ಬೇಡ್ವೆ ಎನ್ನುವ ಬಗ್ಗೆ ತಿರ್ಮಾನಿಸಲಿದೆ. ಸದ್ಯ ಹೈಕೋರ್ಟ್ ನಿಂದ ಜಾಮೀನು ಪಡೆದು ಶೂಟಿಂಗ್ ನಲ್ಲಿ ತೊಡಗಿಕೊಂಡಿರುವ ದರ್ಶನ ವಿದೇಶಕ್ಕೂ ತೆರಳಿದ್ದಾರೆ. ಈ ನಡುವೆ ನಡೆಯುತ್ತಿರುವ ವಿಚಾರಣೆ ತೀವ್ರ ಕುತೂಹಲ‌ ಮೂಡಿಸಿದೆ.