ಮನೆ ರಾಜ್ಯ ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹಲೋತ್’ರಿಂದ ಧ್ವಜಾರೋಹಣ

ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹಲೋತ್’ರಿಂದ ಧ್ವಜಾರೋಹಣ

0

ಬೆಂಗಳೂರು(Bengaluru): ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಇಂದು ಬೆಂಗಳೂರಿನ  ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಇಂದು ರಾಜ್ಯಪಾಲರನ್ನು ಬರಮಾಡಿಕೊಂಡರು.

ಇದಾದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

74ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನಾಡಿನ ಜನೆತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಶುಭಾಶಯಗಳನ್ನು ಕೋರಿದ್ದಾರೆ.

ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ , ಬೆಂಗಳೂರು ನಗರ ಜಿಲ್ಲಾಧಿಕಾರಿ  ಕೆ.ಎ. ದಯಾನಂದ ಉಪಸ್ಥಿತರಿದ್ದರು.

ಹಿಂದಿನ ಲೇಖನಎಲ್ಲಿ ಸ್ಪರ್ಧಿಸಬೇಕೆಂದು ಹೈಕಮಾಂಡ್ ನಿರ್ಧರಿಸಲಿದೆ: ಸಚಿವ ವಿ.ಸೋಮಣ್ಣ
ಮುಂದಿನ ಲೇಖನಪದೋನ್ನತಿ ನೀಡಲು ವಿಳಂಬ ಧೋರಣೆ ಅನುಸರಿಸಿದ ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ಕಿಡಿ; ದಂಡ ವಿಧಿಸುವ ಎಚ್ಚರಿಕೆ