ಮನೆ ರಾಷ್ಟ್ರೀಯ ಚಾಮರಾಜನಗರ ಜಿಲ್ಲೆಯನ್ನು ರಾಷ್ಟ್ರೀಯಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ

ಚಾಮರಾಜನಗರ ಜಿಲ್ಲೆಯನ್ನು ರಾಷ್ಟ್ರೀಯಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ

0

ಹೊಸದಿಲ್ಲಿ : ಚಾಮರಾಜನಗರ ಲೋಕಾಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚಾಮರಾಜನಗರ ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದಲ್ಲಿ ಚಾಮರಾಜನಗರ ಜಿಲ್ಲೆಯು ಅರಿಶಿನ ಬೆಳೆಯುವಲ್ಲಿ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯವು ದೇಶದಲ್ಲಿ ಅರಿಶಿನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ.

ಕರ್ನಾಟಕ ರಾಜ್ಯದಲ್ಲಿ ಚಾಮರಾಜನಗರ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಸುಮಾರು ೮೨೬೦ ಹೆಕ್ಟೇರ್ ಪ್ರದೇಶದಲ್ಲಿ ಅರಿಶಿನ ಬೆಳೆಯನ್ನು ಬೆಳೆಯಲಾಗುತ್ತಿದ್ದು, ಅಂದಾಜು ೪೯,೫೬೪.೮೦ ಮೆಟ್ರಿಕ್ ಟನ್ ಗಳಷ್ಟು ಅರಿಶಿಣ ಉತ್ಪಾದನೆ ಆಗುತ್ತಿದೆ, ಇದು ದೇಶದ ಶೇ. ೪.೨ರಷ್ಟು ಹಾಗೂ ರಾಜ್ಯದ ಶೇ.೩೮.೩ರಷ್ಟು. ಇಷ್ಟು ಉತ್ಪಾದನೆಯಿರುವ ಜಿಲ್ಲೆಯ ರೈತರಿಗೆ ಸೂಕ್ತ ಮಾರುಕಟ್ಟೆ ಸೌಕರ್ಯವಿಲ್ಲ, ಅರಿಸಿನ ಮೌಲ್ಯವರ್ಧನ ಚಟುವಟಿಕೆಗಳಿಗೆ ಅವಕಾಶವಿಲ್ಲಾ, ಬೆಳೆ ಇಳುವರಿ ಹೆಚ್ಚಿಸುವ ತಂತ್ರಜ್ಞಾನದ ಕೊರತೆ ಇದೆ, ಸಮರ್ಪಕ ಗೊಬ್ಬರ ಮತ್ತು ಕೀಟನಾಶಕ ಸಮರ್ಪಕ ಬಳಕೆ ಕುರಿತ ಮಾರ್ಗದರ್ಶನವಿಲ್ಲ, ಆದರು ಕೂಡ ದೇಶದ ಅರಿಶಿನ ಉತ್ಪಾದನೆಯಲ್ಲಿ ಚಾಮರಾಜನಗರದ ಕೊಡುಗೆ ಶೇಕಡ ೪.೨ ರಷ್ಟಿದೆ.

ಚಾಮರಾಜನಗರ ಜಿಲ್ಲೆಯ ರೈತರಿಗೆ ಅರಿಶಿನ ಬೆಲೆಗೆ ಸಂಬಂಧಿಸಿದಂತೆ ನಾವಿನ್ಯ ತಂತ್ರಜ್ಞಾನಗಳ ಕೊರತೆ ಇದ್ದು ಹಾಗೂ ವೈಜ್ಞಾನಿಕ ಬೆಳೆ ಪದ್ಧತಿ ಬಗ್ಗೆ ಅರಿವಿನ ಕೊರತೆ ಇದೆ ಆದ್ದರಿಂದ ರಾಷ್ಟ್ರೀಯ ಅರಿಶಿನ ಮಂಡಳಿ ಕಾರ್ಯ ಚಟುವಟಿಕೆಗಳನ್ನು ಚಾಮರಾಜನಗರ ಜಿಲ್ಲೆಗೆ ವಿಸ್ತರಿಸುವುದರಿಂದ ಈ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಿ ರೈತರ ಆದಾಯದಲ್ಲಿ ಸುಧಾರಣೆ ಆಗುತ್ತದೆ ಎಂದು ಸಂಸದರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.