ಮನೆ ರಾಜಕೀಯ ಬೆಂಗಳೂರು –ಮೈಸೂರು ಹೈವೆಗೆ ಕಾವೇರಿ ನದಿ ಹೆಸರಿಡಲು ಮನವಿ: ಪ್ರತಾಪ್ ಸಿಂಹ

ಬೆಂಗಳೂರು –ಮೈಸೂರು ಹೈವೆಗೆ ಕಾವೇರಿ ನದಿ ಹೆಸರಿಡಲು ಮನವಿ: ಪ್ರತಾಪ್ ಸಿಂಹ

0

ಮೈಸೂರು(Mysuru): ಬೆಂಗಳೂರು – ಮೈಸೂರು  ಹೆದ್ದಾರಿಗೆ ಕಾವೇರಿ ನದಿ ಹೆಸರಿಡಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ನದಿಗಳ ಹೆಸರನ್ನು ಹೈವೇಗೆ ಇಟ್ಟಿದ್ದಾರೆ. ಅದೇ ರೀತಿಯಲ್ಲಿ ಕಾವೇರಿ ನದಿ ಹೆಸರನ್ನು ಹೈವೆಗೆ ಇಡಲು ಮನವಿ ಮಾಡಿದ್ದೇನೆ. ಕಾವೇರಿ ಜೀವನದಿ, ಪವಿತ್ರವಾದ ನದಿ. ಬಹಳ ಭಕ್ತಿಯಿಂದ ಪೂಜಿಸುವ ನದಿ ಕಾವೇರಿ ಎಂದು ಹೇಳಿದರು.

ರಾಜಕಾರಣಿಗಳು ಒಂದೊಂದು ಹೆಸರು ಹೇಳುತ್ತಿದ್ದಾರೆ. ಕಾವೇರಿ ನದಿ ಇಲ್ಲದೆ ಇದ್ದರೆ ನಾವು ಯಾವ ನೀರು ಕುಡಿಯಬೇಕಿತ್ತು? ಕಾವೇರಿ ನದಿ ಇರದಿದ್ದರೆ ಕನ್ನಂಬಾಡಿ ಕಟ್ಟಲು ಆಗುತ್ತಿತ್ತಾ? ನಾಲ್ವಡಿ ಹೆಸರನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಇಡುತ್ತಿದ್ದೇವೆ. ದೇವೇಗೌಡರ ಹೆಸರು ಕೂಡ ಕೇಳಿ ಬಂದಿದೆ. ದೇಶದಲ್ಲಿ ಎಲ್ಲೂ ಹೈವೆಗೆ ವ್ಯಕ್ತಿಯ ಹೆಸರು ಇಟ್ಟಿಲ್ಲ. ಎಸ್.ಎಂ. ಕೃಷ್ಣ ಅವರ ಬಗ್ಗೆ ಗೌರವವಿದೆ. ಅವರನ್ನು ಕೇಳುತ್ತೇವೆ ಎಂದರು.

ನಿನ್ನೆ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸಿದ ಗಡ್ಕರಿ ಅವರು ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದಾರೆ. ರಸ್ತೆ ಬಹಳ ಚೆನ್ನಾಗಿ ಬಂದಿದೆ ಎಂದು ಹೇಳಿದ್ದಾರೆ. ದ್ವಿಚಕ್ರ – ತ್ರಿಚಕ್ರ ವಾಹನಗಳಿಗೆ ಬೆಂಗಳೂರು – ಮೈಸೂರು ಹೈವೆಯಲ್ಲಿ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

https://efbaf7d61b08240a322b754591662f06.safeframe.googlesyndication.com/safeframe/1-0-40/html/container.html?n=0 ಸರ್ವಿಸ್ ರೋಡ್ ಸಂಪೂರ್ಣ ವಾಗಿ ನಿರ್ಮಾಣವಾಗುವವರೆಗೂ ಎಲ್ಲಾ ವಾಹನಗಳಿಗೆ ಅವಕಾಶ ನೀಡಲಾಗುತ್ತದೆ. ಸರ್ವಿಸ್ ರಸ್ತೆ ನಿರ್ಮಾಣವಾದ ಮೇಲೆ ದ್ವಿಚಕ್ರ – ತ್ರಿಚಕ್ರ ವಾಹನಗಳಿಗೆ ಹೈವೆ ರಸ್ತೆಯಲ್ಲಿ ಅವಕಾಶವಿಲ್ಲ.ಆಕ್ಸಿಡೆಂಟ್ ಫ್ರೀ ರಸ್ತೆ ಮಾಡುವ ಉದ್ದೇಶದಿಂದ ಈ ತೀರ್ಮಾನ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಹಿಂದಿನ ಲೇಖನಮಂಡ್ಯ: ಉರುಳಿ ಬಿದ್ದ ಕೆಎಸ್’ಆರ್’ಟಿಸಿ ಬಸ್- 32 ಪ್ರಯಾಣಿಕರಿಗೆ ಗಾಯ
ಮುಂದಿನ ಲೇಖನಸಕಲೇಶಪುರದ ಜನಪ್ರಿಯ ಪ್ರವಾಸಿ ಸ್ಥಳಗಳ ಮಾಹಿತಿ ಇಲ್ಲಿದೆ