ಬೆಂಗಳೂರು: ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಶೇ.4ರಷ್ಟು ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರ ಸದನದಲ್ಲಿ ಅಂಗೀಕರಿಸಿದ್ದ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತೊಮ್ಮೆ ಅಂಕಿತ ನೀಡದೆ ವಾಪಸ್ ಕಳುಹಿಸಿದ್ದಾರೆ. ಇದು ಎರಡನೇ ಬಾರಿ ಮಸೂದೆ ವಾಪಸ್ಸಾಗಿರುವುದು ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿರುವಂತೆ ಪರಿಣಮಿಸಿದೆ.
ರಾಜ್ಯಪಾಲರು ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವಂತೆ ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಆ ಬಳಿಕ ಸ್ಪಷ್ಟೀಕರಣದೊಂದಿಗೆ ಮಸೂದೆ ಮರು ಸಲ್ಲಿಕೆ ಮಾಡಲಾಗಿತ್ತು.
ಆದರೆ, ರಾಜ್ಯಪಾಲರು ತಮ್ಮ ಹಿಂದಿನ ನಿರ್ಧಾರವನ್ನು ಮರುಪರಿಶೀಲಿಸಲು ತಾತ್ಸಾರ ತೋರಿದ್ದು, ಮಸೂದೆಯನ್ನು ಮತ್ತೆ ಹಿಂದಿರುಗಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾದಂತೆ ಆಗಿದೆ.















