ಮುಟ್ಟುಗೋಲು ಹಾಕಿಕೊಂಡಿರುವ ಪಾಸ್ಪೋರ್ಟ್ ಹಿಂದಿರುಗಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದ ಶುಶ್ರೂಷಕಿಯೊಬ್ಬರ ಮನವಿಯನ್ನು ಒಂದು ತಿಂಗಳಲ್ಲಿ ಪರಿಗಣಿಸಿ ನಿರ್ಧಾರ ತಿಳಿಸಬೇಕು ಎಂದು ವಿದೇಶಾಂಗ ಸಚಿವಾಲಯಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.
ಬೆಳ್ತಂಗಡಿ ತಾಲ್ಲೂಕಿನ ಗಂಡಿಬಾಗಿಲು ನೆರಿಯಾ ನಿವಾಸಿ ಶೇನಿ ಜಾಯ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್ ಸುಶಾಂತ್ ವೆಂಕಟೇಶ್ ಪೈ ಅವರು ಅರ್ಜಿದಾರರು ಶುಶ್ರೂಷಕಿಯಾಗಿ ಯೆಮನ್ ದೇಶದಲ್ಲಿ ಕೆಲಸದಲ್ಲಿದ್ದರು. ಅವರಿಗೆ ಕೇಂದ್ರದ ಅಧಿಸೂಚನೆಯ ಬಗ್ಗೆ ಮಾಹಿತಿ ಇರಲಿಲ್ಲ. 2023ರ ಪ್ರಯಾಣದ ವೇಳೆ ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಂಡ ಬಳಿಕ ವಲಸೆ ಅಧಿಕಾರಿಗಳು ಷೋಕಾಸ್ ನೋಟಿಸ್ ಜಾರಿ ಮಾಡಿದ್ದರು. ತದನಂತರ ಅರ್ಜಿದಾರರು ತಾವು ಯಾಕೆ ಪ್ರಯಾಣ ಬೆಳೆಸಬೇಕಾಯಿತು ಎಂಬ ಬಗ್ಗೆ ವಿವರಣೆ ನೀಡಿದ್ದರು. ಆದರೂ ಅವರ ಪಾಸ್ಪೋರ್ಟ್ ಹಿಂದಿರುಗಿಸಿಲ್ಲ ಎಂದು ಪೀಠಕ್ಕೆ ವಿವರಿಸಿದರು.
ಇದಕ್ಕೆ ಪ್ರತಿಯಾಗಿ, ಕೇಂದ್ರದ ಪರ ಹಾಜರಿದ್ದ ಉಪ ಸಾಲಿಸಿಟರ್ ಜನರಲ್ ಎಚ್ ಶಾಂತಿಭೂಷಣ್ ಅವರು ಅರ್ಜಿದಾರರು ಪಾಸ್ಪೋರ್ಟ್ ಹಿಂದಿರುಗಿಸುವಂತೆ ನಮಗೆ ಯಾವುದೇ ರೀತಿಯ ಅರ್ಜಿ ಸಲ್ಲಿಸಿಲ್ಲ. ಅಷ್ಟಕ್ಕೂ ಯೆಮೆನ್ನಲ್ಲಿ ನಾಗರಿಕ ಜನಜೀವನ ಅಸ್ಥಿರತೆಯಲ್ಲಿದೆ. ಸುರಕ್ಷತೆ ದುರ್ಬಲಗೊಂಡಿದೆ ಎಂಬ ಕಾರಣಕ್ಕಾಗಿಯೇ ಯೆಮೆನ್ ಪ್ರವಾಸ ನಿಷೇಧಿಸಿ ಕೇಂದ್ರ ವಿದೇಶಾಂಗ ಸಚಿವಾಲಯ 2017ರ ಸೆಪ್ಟೆಂಬರ್ 26ರಂದು ಅಧಿಸೂಚನೆ ಹೊರಡಿಸಿದೆ. ಅರ್ಜಿದಾರರು ಅಧಿಸೂಚನೆ ಉಲ್ಲಂಘಿಸಿರುವ ಕಾರಣ ಪಾಸ್ಪೋರ್ಟ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವಿವರಿಸಿದರು.
ವಾದ ಪ್ರತಿವಾದ ಆಲಿಸಿದ ಪೀಠವು ಅರ್ಜಿದಾರರು ಈ ಆದೇಶ ಪಡೆದ ನಾಲ್ಕು ವಾರಗಳಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಬೇಕು. ಅದನ್ನು ಮುಂದಿನ ನಾಲ್ಕು ವಾರಗಳಲ್ಲಿ ಪರಿಶೀಲಿಸಿ ಸೂಕ್ತ ನಿರ್ಧಾರ ತಿಳಿಸಬೇಕು ಎಂದು ಸೂಚಿಸಿತು.
“ರಾಷ್ಟ್ರೀಯ ಭದ್ರತೆ ಹಾಗೂ ಭಾರತೀಯ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ಒಂದಾದ ಯೆಮೆನ್ ದೇಶಕ್ಕೆ ಪ್ರವಾಸ ಕೈಗೊಳ್ಳುವುದನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಾಗಿಯೇ ಇದೆ” ಎಂದು ಪೀಠ ಈ ಮೊದಲು ವಿಚಾರಣೆ ವೇಳೆ ಮೌಖಿಕ ಸಹಮತ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರರು 2010–11ರಿಂದಲೇ ಯೆಮೆನ್ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರ ಪಾಸ್ಪೋರ್ಟ್ ಅನ್ನು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ 2023ರ ಆಗಸ್ಟ್ 20ರಂದು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಂತೆಯೇ, 2017ರ ಅಧಿಸೂಚನೆಯ ಅನುಸಾರ ಮತ್ತು ಪಾಸ್ಪೋರ್ಟ್ ಕಾಯಿದೆ–1967ರ ಸೆಕ್ಷನ್19ರ ಅನ್ವಯ ಅವರ ಪಾಸ್ಪೋರ್ಟ್ ಅನ್ನು ಅಮಾನ್ಯಗೊಳಿಸಲಾಗಿದೆ ಎಂಬುದು ಅರ್ಜಿದಾರರ ಆಕ್ಷೇಪವಾಗಿತ್ತು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.