ಮೈಸೂರು: ವರುಣ ಕ್ಷೇತ್ರದ ಸಿದ್ದರಾಮನಹುಂಡಿ ಗ್ರಾಮದಲ್ಲಿ ಗುರುವಾರ ನಡೆದ ಗಲಾಟೆಯಲ್ಲಿ ಗಾಯಗೊಂಡು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ನಾಗೇಶ್ ಅವರ ಆರೋಗ್ಯವನ್ನು ಪಕ್ಷದ ಅಭ್ಯರ್ಥಿ ವಿ.ಸೋಮಣ್ಣ ವಿಚಾರಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆಯಿತು. ಹತಾಶ ಮನೋಭಾವದಿಂದ, ಸೋಲಿನ ಭಯದಿಂದ ಈ ಕೆಲಸ ಮಾಡಿದ್ದಾರೆ. ನಾನು ಎಲ್ಲಿ ಹೋಗುತ್ತೇವೆಯೋ ಅಲ್ಲಿಗೆ ಕೆಲವರು ಬರುತ್ತಾರೆ ಎಂದು ದೂರಿದರು.
ಕ್ಷೇತ್ರದಲ್ಲಿ ಒಂದು ಜಾತಿಯ ಜನ ಮಾತ್ರ ದ್ವೇಷ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ವರುಣ ಕ್ಷೇತ್ರದ ಸ್ಥಿತಿ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ. ಗುರುವಾರ ನಡೆದ ಘಟನೆಯ ವಿಚಾರದಲ್ಲಿ ಪೊಲೀಸರು ಕೂಡ ಕುತಂತ್ರ ಮಾಡಿದರು ಎಂದು ಆರೋಪಿಸಿದರು.
ಸಂಸದ ಪ್ರತಾಪ ಸಿಂಹ ಮಾತನಾಡಿ, ಸಿದ್ದರಾಮಯ್ಯ ಪಾಳಯದಲ್ಲಿ ಹತಾಶೆ ಮತ್ತು ಸೋಲಿನ ಭಯ ಶುರುವಾಗಿದೆ. ಬಿಜೆಪಿಯವರು ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲಾ ಕೆಲವರು ಅವಾಚ್ಯ ಶಬ್ದಗಳನ್ನು ಬಳಸುತ್ತಿದ್ದಾರೆ. ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಗುರುವಾರ ನಮ್ಮ ಪ್ರಚಾರ ಮೆರವಣಿಗೆ ವೇಳೆ ಗಲಾಟೆ ಮಾಡಿದ್ದಾರೆ. ಬಕೆಟ್’ಗಳಲ್ಲಿ ಕಲ್ಲು ಇಟ್ಟುಕೊಂಡಿದ್ದರು. ಗಲಾಟೆ ಮಾಡಲು ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಸೋಲಿನ ಭಯದಿ೦ದಾಗಿ ಸಿದ್ದರಾಮಯ್ಯ ಟೀಂ ಈ ರೀತಿ ಗಲಾಟೆಗಳನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಿದ್ದಾರಾ? ಅವರು ತಮ್ಮ ಸ್ವಜಾತಿಯವರಿಗೆ ಚಿತಾವಣೆ ನೀಡಿ ಈ ರೀತಿ ತೊಂದರೆ ಕೊಡಿಸುತ್ತಿದ್ದಾರೆ. ಅವರೊಬ್ಬ ಜಾತಿವಾದಿ, ಸಿದ್ದರಾಮಯ್ಯ ಅವರಿಗೆ ಸ್ವಜಾತಿ ಮಾತ್ರ ಮುಖ್ಯ ಎನ್ನುವುದು ವರುಣ ಜನರಿಗೆ ಗೊತ್ತಿದೆ. ಈ ಕಾರಣದಿಂದಾಗಿಯೇ ಎಲ್ಲಾ ವರ್ಗದ ಜನರು ಸೋಮಣ್ಣ ಪರವಾಗಿ ನಿ೦ತಿದ್ದಾರೆ ಎಂದರು.
ಸೋಮಣ್ಣ ಒಂದು ಕರೆ ಕೊಟ್ಟರೆ ನಿಮಗೂ ಎಲ್ಲಾ ಊರುಗಳಲ್ಲೂ ಇದೇ ರೀತಿ ಆಗಬಹುದು. ಆಗ ಪರಿಸ್ಥಿತಿ ಏನಾಗುತ್ತದ ಊಹಿಸಿ ಸಿದ್ದರಾಮಯ್ಯನವರೇ ಎಂದು ಎಚ್ಚರಿಕೆ ನೀಡಿದ ಅವರು, ಇದನ್ನು ನೀವು ಮುಂದುವರಿಸಿದರೆ, ನಮಗೂ ಶಕ್ತಿ ಇರುವುದನ್ನು ಸಾಬೀತು ಮಾಡಬೇಕಾಗುತ್ತದೆ. ಆಗ ವರುಣದಲ್ಲಿ ಶಾಂತಿ ಕೆಡುತ್ತದೆ ಎಂದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.