ನವದೆಹಲಿ: ದೆಹಲಿಯ ರಾಮ ಮನೋಹರ ಲೋಹಿಯಾ(RML) ಆಸ್ಪತ್ರೆಯಲ್ಲಿ ವ್ಯಾಪಕವಾಗಿದ್ದ ಭ್ರಷ್ಟಾಚಾರ ಪ್ರಕರಣ ಸಂಬಂಧ ಸಿಬಿಐ ಇಂದು (ಗುರುವಾರ) ಮತ್ತಿಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈದ್ಯಕೀಯ ಸಲಕರಣೆ ಪೂರೈಕೆದಾರ ಆಕರ್ಶನ್ ಗುಲಾಟಿ ಮತ್ತು ನರ್ಸ್ ಶಾಲು ಶರ್ಮಾ ಬಂಧಿತರು. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಪ್ರಕರಣದಲ್ಲಿ ಇಬ್ಬರು ಹೃದ್ರೋಗ ತಜ್ಞರನ್ನೂ ಒಳಗೊಂಡಂತೆ 9 ಜನರನ್ನು ಸಿಬಿಐ ಬುಧವಾರ ಬಂಧಿಸಿತ್ತು. ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ. ಅಜಯ್ ರಾಜ್ ಮತ್ತು ಸಹಾಯಕ ಪ್ರಾಧ್ಯಾಪಕ ಡಾ. ಪರ್ವತಗೌಡ ಚನ್ನಪ್ಪಗೌಡ ಬಂಧಿತ ವೈದ್ಯರು.
ಸ್ಟಂಟ್ ಹಾಗೂ ಇನ್ನಿತರ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಮಾರಾಟಗಾರರಿಂದ ಲಂಚ ಪಡೆದ ಆರೋಪ ಇವರ ಮೇಲಿದೆ.
ಪ್ರಕರಣದಲ್ಲಿ ಉಪಕರಣಗಳ ಪೂರೈಕೆದಾರ ನಾಗಪಾಲ್ ಟೆಕ್ನಾಲಜೀಸ್ನ ನರೇಶ ನಾಗಪಾಲ್ ಅವರನ್ನೂ ಬಂಧಿಸಲಾಗಿದೆ. ತಮ್ಮ ಉಪಕರಣಗಳ ಖರೀದಿಗೆ ಶಿಫಾರಸು ಮಾಡಲು ನಾಗಪಾಲ್ ಅವರು ಪರ್ವತಗೌಡ ಅವರಿಗೆ ₹2.48 ಲಕ್ಷ ಲಂಚ ನೀಡಿದ್ದರು.
ಭಾರ್ತಿ ಮೆಡಿಕಲ್ ಟೆಕ್ನಾಲಜೀಸ್ನ ಭರತ್ ಸಿಂಗ್ ದಲಾಲ್ ಅವರು ಡಾ. ರಾಜ್ ಅವರಿಗೆ ಯುಪಿಐ ಮೂಲಕ ಎರಡು ಬಾರಿ ಹಣ ಪಾವತಿಸಿದ್ದಾರೆ. ಅಬ್ರಾರ್ ಅಹಮದ್ ಅವರು ಆಸ್ಪತ್ರೆಯ ಕ್ಯಾಥ್ ಲ್ಯಾಬ್ ಮುಖ್ಯಸ್ಥ ರಜನೀಶ್ ಕುಮಾರ್ ಅವರಿಗೆ ಲಂಚ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.