ಮನೆ ರಾಷ್ಟ್ರೀಯ ಮಂತ್ರಾಲಯದಲ್ಲಿ ರಸ್ತೆ ಅಪಘಾತ: ಮುದ್ದೇಬಿಹಾಳದ ವ್ಯಕ್ತಿ ಸಾವು

ಮಂತ್ರಾಲಯದಲ್ಲಿ ರಸ್ತೆ ಅಪಘಾತ: ಮುದ್ದೇಬಿಹಾಳದ ವ್ಯಕ್ತಿ ಸಾವು

0

ಮುದ್ದೇಬಿಹಾಳ: ಕರ್ನಾಟಕದ ರಾಯಚೂರು ಜಿಲ್ಲೆ ಗಡಿ ಭಾಗದಲ್ಲಿರುವ ಆಂಧ್ರಪ್ರದೇಶದ ಮಂತ್ರಾಲಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ನಿವಾಸಿ ವಿಶ್ವನಾಥ ಬಸನಗೌಡ ಬಿರಾದಾರ (ಹಳ್ಳೂರ) (35) ಸಾವನ್ನಪ್ಪಿದ್ದಾರೆ.

ಕೆಲ ತಿಂಗಳಿಂದ ಮಂತ್ರಾಲಯದಲ್ಲೆ ಸಣ್ಣ ಪುಟ್ಟ ಉದ್ಯಮದಲ್ಲಿ ತೊಡಗಿದ್ದ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಮುದ್ದೇಬಿಹಾಳಕ್ಕೆ ಬರುವಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಾಯಚೂರು ಘಟಕದ ಬಸ್ಸಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಮೃತರಿಗೆ ತಾಯಿ, ಪತ್ನಿ, ಅಪಾರ ಬಂಧು ಬಳಗ ಇದ್ದಾರೆ. ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಇಂದು (ಶನಿವಾರ) ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ಇಲ್ಲಿನ ಆಲಮಟ್ಟಿ ರಸ್ತೆಯಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿ ಕೈಲಾಸ ವನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹಿಂದಿನ ಲೇಖನಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ: ಆರ್ ಅಶೋಕ
ಮುಂದಿನ ಲೇಖನಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪಗಳಲ್ಲಿ ಹುರುಳಿಲ್ಲ: ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್