ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹುಬ್ಬಳ್ಳಿ(Hubballi): 2030ರ ವೇಳೆಗೆ ಭಾರತವು ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ದೇಶದ ಯುವಜನರ ಪಾತ್ರ ಮಹತ್ವದಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಇಲ್ಲಿಯ ವಿದ್ಯಾನಗರದ ಕೆಎಲ್’ಇ ಸಂಸ್ಥೆ ಬಿವಿಬಿ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಮಹಾವಿದ್ಯಾಲಯ ಅಮೃತ ಮಹೋತ್ಸವ ಸಮಾರಂಭ ಹಾಗೂ 25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಬೃಹತ್ ಒಳಾಂಗಣ ಕ್ರೀಡಾಂಗಣವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಶ್ವದಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿದೆ. ದೇಶವು ವಿಶ್ವದ 5ನೇ ಆರ್ಥಿಕ ಶಕ್ತಿಯಾಗಿ ಬೆಳೆದಿದೆ ಎಂದು ತಿಳಿಸಿದರು.
ದೇಶ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸೇವೆ ಮಾಡುತ್ತಿರುವ ಕೆಎಲ್’ಇ ಬಿವಿಬಿ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವ ಆಚರಿಸುತ್ತಿದೆ. ಇಂತಹ ಸಂಭ್ರಮದಲ್ಲಿ ಭಾಗವಹಿಸಿರುವುದು ನನ್ನ ಸೌಭಾಗ್ಯ ಎಂದರು.
ತಿರುಪತಿಯ ವಿಶ್ವ ಧರ್ಮ ಚೇತನ ಮಂಚನ ಬ್ರಹ್ಮಶ್ರೀ ಗುರುದೇವ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, , ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಜಗದೀಶ ಶೆಟ್ಟರ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮುರುಗೇಶ ನಿರಾಣಿ, ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕುಲಪತಿ ಅಶೋಕ ಶೆಟ್ಟರ, ಕೆಎಲ್’ಇ ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ ಇದ್ದರು.