ಮನೆ ಸುದ್ದಿ ಜಾಲ ರೋಪ್ ವೇ ದುರಂತ: ಒಬ್ಬರ ಸಾವು, ಟ್ರಾಲಿಗಳಲ್ಲಿ ಸಿಲುಕಿದ 48 ಮಂದಿ

ರೋಪ್ ವೇ ದುರಂತ: ಒಬ್ಬರ ಸಾವು, ಟ್ರಾಲಿಗಳಲ್ಲಿ ಸಿಲುಕಿದ 48 ಮಂದಿ

0

ದೇವಘರ್: ಜಾರ್ಖಂಡ್‌ನ ದೇವಘರ್ ಜಿಲ್ಲೆಯ ಬಾಬಾ ವೈದ್ಯನಾಥ ದೇಗುಲ ಬಳಿಯ ತ್ರಿಕೂಟ ಪರ್ವತ ಪ್ರದೇಶದಲ್ಲಿ 12 ರೋಪ್‌ವೇ ಟ್ರಾಲಿಗಳು ಡಿಕ್ಕಿಯಾದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು, 48 ಮಂದಿ ಟ್ರಾಲಿಗಳಲ್ಲಿ ಸಿಲುಕಿದ್ದಾರೆ.

ಭಾನುವಾರ ಸಂಜೆ 4.30ರ ವೆಳೆಗೆ ಟ್ರಾಲಿಗಳ ಡಿಕ್ಕಿ ಸಂಭವಿಸಿದೆ. 10 ಮಂದಿ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬರು ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಪ್ರವಾಸಿಗರನ್ನು ಸುರಕ್ಷಿತವಾಗಿ ಏರ್‌ಲಿಫ್ಟ್ ಮಾಡಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ತಂಡವು ಭಾನುವಾರ ರಾತ್ರಿಯಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದು, 11 ಮಂದಿಯನ್ನು ರಕ್ಷಿಸಿದೆ. ಸ್ಥಳೀಯರೂ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗುತ್ತಿದ್ದಾರೆ ಎಂದು ದೇವಘರ್  ಡಿಸಿ ಮಂಜುನಾಥ್ ಭಜಂತ್ರಿ ತಿಳಿಸಿದ್ದಾರೆ.

ಜಾರ್ಖಂಡ್ ಪ್ರವಾಸೋದ್ಯಮ ಇಲಾಖೆ ಮಾಹಿತಿ ಪ್ರಕಾರ, ತ್ರಿಕೂಟ ರೋಪ್‌ವೇ ಬಾಬಾ ವೈದ್ಯನಾಥ ದೇಗುಲದಿಂದ ಸುಮಾರು 20 ಕಿ.ಮೀ. ದೂರದಲ್ಲಿದ್ದು, 766 ಮೀಟರ್ ಉದ್ದವಿದೆ. ಪರ್ವತವು 392 ಮೀಟರ್ ಎತ್ತರವಿದೆ.

ಹಿಂದಿನ ಲೇಖನನಾಳೆಯಿಂದ ಹಲವು ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ
ಮುಂದಿನ ಲೇಖನಬಾಲಿವುಡ್ ನಟ ಶಿವ ಸುಬ್ರಹ್ಮಣ್ಯಂ ನಿಧನ