ಮನೆ ರಾಜ್ಯ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ; ಹಾಕಿಕೊಂಡು ಬಂದ್ರೆ ಕಾನೂನು ಕ್ರಮ – ಸಚಿವ ಮಧು ಬಂಗಾರಪ್ಪ

ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ; ಹಾಕಿಕೊಂಡು ಬಂದ್ರೆ ಕಾನೂನು ಕ್ರಮ – ಸಚಿವ ಮಧು ಬಂಗಾರಪ್ಪ

0

ಮೈಸೂರು : ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ‌. ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಸಮಾನತೆ ಸಂಕೇತ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ, ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಎಂದಿದ್ದಾರೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್​ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.