ಮನೆ ರಾಜ್ಯ ಸನಾತನ ಧರ್ಮ ಏಕೈಕ ಧರ್ಮ, ಉಳಿದೆಲ್ಲವೂ ಪಂಥಗಳು, ಪೂಜಾ ವಿಧಾನಗಳು: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ 

ಸನಾತನ ಧರ್ಮ ಏಕೈಕ ಧರ್ಮ, ಉಳಿದೆಲ್ಲವೂ ಪಂಥಗಳು, ಪೂಜಾ ವಿಧಾನಗಳು: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ 

0

ಲಕ್ನೋ: ಸನಾತನ ಧರ್ಮ ಏಕೈಕ ಧರ್ಮವಾಗಿದೆ ಮತ್ತು ಉಳಿದೆಲ್ಲವೂ ಪಂಥಗಳು ಮತ್ತು ಪೂಜಾ ವಿಧಾನಗಳು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌  ತಿಳಿಸಿದ್ದಾರೆ.

ಗೋರಖನಾಥ ದೇವಾಲಯದಲ್ಲಿ ನಡೆದ ‘ಶ್ರೀಮದ್ ಭಾಗವತ್ ಕಥಾ ಜ್ಞಾನ ಯಾಗ’ದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಸನಾತನ ಧರ್ಮವು ಮಾನವೀಯತೆಯ ಧರ್ಮವಾಗಿದೆ ಮತ್ತು ಅದರ ಮೇಲಿನ ಯಾವುದೇ ದಾಳಿಯು ಇಡೀ ಮಾನವೀಯತೆಯನ್ನು ಅಪಾಯಕ್ಕೆ ತಳ್ಳುತ್ತದೆ ಎಂದು ಹೇಳಿದ್ದಾರೆ.

ಶ್ರೀಮದ್ ಭಾಗವತ್ ಸಾರವನ್ನು ನಿಜವಾಗಿಯೂ ಗ್ರಹಿಸಲು ಮುಕ್ತ ಮನಸ್ಥಿತಿಯನ್ನು ಹೊಂದುವ ಮಹತ್ವವನ್ನು ಒತ್ತಿ ಹೇಳಿದರು. ಜೊತೆಗೆ ಸಂಕುಚಿತ ಮನಸ್ಸಿನ ದೃಷ್ಟಿಕೋನಗಳು ಅದರ ಬೋಧನೆಗಳ ವಿಶಾಲತೆಯನ್ನು ಒಳಗೊಳ್ಳಲು ಹೆಣಗಾಡುತ್ತವೆ ಎಂದರು.

ಭಗವದ್ಗೀತೆ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್‌, ಭಗವದ್ಗೀತೆಯು ಮನುಕುಲಕ್ಕೆ ದಾರಿದೀಪವಾಗಿದೆ. ಇದರಿಂದ ಮಾನವ ಸರಿಯಾದ ದಾರಿಯಲ್ಲಿ ಸಾಗಲು ಸಾಧ್ಯವಾಗುತ್ತಿದೆ. ಕೆಲವು ಕುತ್ಸಿತ ಹಾಗೂ ಸಂಕುಚಿತ ಮನಸ್ಸುಗಳು ಭಗವದ್ಗೀತೆಯ ಸಾರದ ಬಗ್ಗೆ ನಕಾರಾತ್ಮಕ ಮಾಹಿತಿಯನ್ನು ಹರಡುತ್ತವೆ. ಆದರೆ, ಮನುಕುಲಕ್ಕೆ ಭಗವದ್ಗೀತೆಯು ದೀವಿಗೆಯಾಗಿದೆ ಎಂದು ಹೇಳಿದರು.

ಹಿಂದಿನ ಲೇಖನಗೋಕಾಕ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್: ಆರೋಪಿಗಳ ಬಂಧನ
ಮುಂದಿನ ಲೇಖನಜಾತಿ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ: ಪ್ರಧಾನಿ ಮೋದಿ