ಮನೆ ಅಪರಾಧ ಗುಜರಾತ್ ‘ನಲ್ಲಿ ಸ್ಯಾಂಟ್ರೋ ರವಿ ಬಂಧನ

ಗುಜರಾತ್ ‘ನಲ್ಲಿ ಸ್ಯಾಂಟ್ರೋ ರವಿ ಬಂಧನ

0

ಬೆಂಗಳೂರು: ಕಳೆದ 11 ದಿನಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್’ನಲ್ಲಿ  ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ “ಸ್ಯಾಂಟ್ರೋ ರವಿ” ಎಂದು ಕರೆಯಲ್ಪಡುವ ಕೆ.ಎಸ್. ಮಂಜುನಾಥ್ ದೇಶದಿಂದ ಪರಾರಿಯಾಗುವುದನ್ನು ತಡೆಯಲು ಆತನ ವಿರುದ್ಧ ಲುಕ್ಔಟ್ ಸುತ್ತೋಲೆ ಹೊರಡಿಸಲಾಗಿತ್ತು. ರವಿಯ ಬಂಧನಕ್ಕಾಗಿ ನಾಲ್ವರು ಎಸ್ ಪಿ ಗಳ ವಿಶೇಷ ತಂಡವನ್ನು ರಚಿಸಲಾಗಿತ್ತು.

ಹಣ ವರ್ಗಾವಣೆ ವಂಚನೆ ಆರೋಪದಡಿ ಸ್ಯಾಂಟ್ರೋ ರವಿ ವಿರುದ್ಧ ಜಗದೀಶ್ ಎಂಬುವರು ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಹಲವು ವರ್ಷಗಳಿಂದ ರವಿಯು ಹನಿ ಟ್ರ್ಯಾಪಿಂಗ್, ಅಥವಾ ಬ್ಲ್ಯಾಕ್ಮೇಲ್ ಮಾಡುವ ಮೂಲಕ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ತನ್ನ ಇತರ ಕೆಲಸವನ್ನು ಮಾಡಲು ಪ್ರಾರಂಭಿಸಿದ್ದ ಎಂದು ಆರೋಪಿಸಲಾಗಿದೆ.

ಸ್ಯಾಂಟ್ರೋ ರವಿ ಅವರು ರಾಜ್ಯ ಅಬಕಾರಿ ಇಲಾಖೆಯ ಮಾಜಿ ಅಧಿಕಾರಿಯ ಮಗ. ರವಿ, 1995 ರಿಂದ ಮಾನವ ಕಳ್ಳಸಾಗಣೆದಾರನಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಹಿರಿಯ ಅಧಿಕಾರಿಯೊಬ್ಬರು 1988 ರಲ್ಲಿ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಅಪಹರಿಸಿ, ಆಕೆಯ ಮೇಲೆ ದೈಹಿಕ ದೌರ್ಜನ್ಯ ನಡೆಸಿ ಅದನ್ನು ಮುಚ್ಚಿಡಲು ಪ್ರಯತ್ನಿಸಿದ ಕೆಲವು ದಿನಗಳ ನಂತರ ಅವನನ್ನು ಬಂಧಿಸಲಾಗಿತ್ತು, ಆದರೆ ಅನಾರೋಗ್ಯದ ನೆಪದಲ್ಲಿ ಮೈಸೂರು ಮೂಲದ ಕೆಆರ್ ಆಸ್ಪತ್ರೆಯಿಂದ ಪರಾರಿಯಾಗಿದ್ದ.

ಭೂಗತವಾಗಿ ಉಳಿದ ನಂತರ, ಮಂಜುನಾಥ್ ಸ್ಯಾಂಟ್ರೋ ರವಿ ಎಂಬ ಹೆಸರಿನಲ್ಲಿ ಮಹಿಳೆಯರಿಗೆ ಉದ್ಯೋಗದ ಭರವಸೆ ನೀಡಿ ನಂತರ ಅವರನ್ನು ಮಾನವ ಕಳ್ಳಸಾಗಣೆಗೆ ತಳ್ಳಿದ್ದ ಎಂಬ ಆರೋಪ ಕೇಳಿ ಬಂದಿದೆ.

ಹಿಂದಿನ ಲೇಖನಚೆಕ್ ಬೌನ್ಸ್ ಪ್ರಕರಣ: ನಿರ್ದೇಶಕ ಗುರು ಪ್ರಸಾದ್ ಬಂಧನ
ಮುಂದಿನ ಲೇಖನಐಆರ್’ಸಿಟಿಸಿ ಟೂರ್ ಪ್ಯಾಕೇಜ್: ಬೆಂಗಳೂರಿನಿಂದ ಅಂಡಮಾನ್ ದ್ವೀಪದ ಪ್ರವಾಸ ಮಾಡಿ