ನಟ ರಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ಹೇಮಂತ್ ಎಂ. ಅವರ ಕಾಂಬಿನೇಷನ್ ನಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ (ಸೈಡ್ ಎ) ಸಿನಿಮಾ ಮೂಡಿಬಂದಿದೆ. ಹೇಮಂತ್ ಎಂ. ರಾವ್ ಅವರ ಟ್ರೇಡ್ ಮಾರ್ಕ್ ಅದನ್ನು ಅವರು ಈ ಬಾರಿಯೂ ಮುಂದುವರಿಸಿದ್ದಾರೆ. ಒಂದು ಗಾಢವಾದ ಪ್ರೇಮಕಥೆಯನ್ನು ಅವರು ಈ ಸಿನಿಮಾದಲ್ಲಿ ಹೇಳಿದ್ದಾರೆ. ಆ ಕಥೆಗೆ ರಕ್ಷಿತ್ ಶೆಟ್ಟಿ ರುಕ್ಮಿಣಿ ವಸಂತ್ ಮುಂತಾದ ಕಲಾವಿದರು ಜೀವ ತುಂಬಿದ್ದಾರೆ.
ಮನು (ರಕ್ಷಿತ್ ಶೆಟ್ಟಿ) ಮತ್ತು ಪ್ರಿಯಾ (ರುಕ್ಮಿಣಿ ವಸಂತ್) ಎಂಬ ಇಬ್ಬರು ಮಧ್ಯಮ ವರ್ಗದ ಪ್ರೇಮಿಗಳ ಕಹಾನಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿದೆ. ಒಂದಷ್ಟು ಅನಿರೀಕ್ಷಿತ ಘಟನೆಗಳ ಕಾರಣದಿಂದ ಮನು ಜೈಲು ಸೇರುತ್ತಾನೆ. ಆ ಕಷ್ಟದ ಸಂದರ್ಭದಲ್ಲಿ ಈ ಪ್ರೇಮಿಗಳ ನಂಬಿಕೆ ಎಷ್ಟು ಗಟ್ಟಿಯಾಗಿರುತ್ತದೆ? ಮನು ಮಾಡಿದ ತಪ್ಪು ಏನು? ಅಂತಿಮವಾಗಿ ಆ ಕಷ್ಟದಿಂದ ಅವರು ಹೊರಬರುತ್ತಾರೋ ಇಲ್ಲವೋ ಎಂಬುದು ಈ ಸಿನಿಮಾದ ಕಥೆ. ಆದರೆ ಈ ಸಿನಿಮಾದಲ್ಲಿ ನಿರ್ದೇಶಕರು ಹೇಳಿರುವುದು ಅರ್ಧ ಕಥೆ ಮಾತ್ರ.
ಎರಡನೇ ಭಾಗ ಸೈಡ್ ಬಿ ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ಹೀಗೆ ಎರಡೂ ಭಾಗಗಳ ಚಿತ್ರೀಕರಣವನ್ನು ಒಟ್ಟಿಗೆ ಮುಕ್ತಾಯಗೊಳಿಸಿರುವ ಸಪ್ತ ಸಾಗರದಾಚೆ ಎಲ್ಲೋ ಚಿತ್ರತಂಡ ನಿನ್ನೆ ( ಆಗಸ್ಟ್ 30 ) ಚಿತ್ರದ ಪ್ರೀಮಿಯರ್ ಪ್ರದರ್ಶನವನ್ನು ಆಯೋಜಿಸಿತ್ತು. ಚಿತ್ರ ಮುಕ್ತಾಯಗೊಂಡ ಬಳಿಕ ಸಪ್ತ ಸಾಗರದಾಚೆ ಎಲ್ಲೋ ಚಿತ್ರತಂಡ ಪರದೆ ಮುಂದೆ ನಿಂತು ಶೋಗೆ ಬಂದಿದ್ದವರಲ್ಲಿ ವಿಶೇಷ ಮನವಿಯೊಂದನ್ನು ಮಾಡಿದೆ. ಸಿನಿಮಾ ಮುಗಿದ ಬಳಿಕ ಮಾತನಾಡಿದ ನಟ ರಕ್ಷಿತ್ ಶೆಟ್ಟಿ “ಚಿತ್ರ ಇಷ್ಟವಾದವರಿಗೂ ಧನ್ಯವಾದಗಳು ಹಾಗೂ ಚಿತ್ರ ಇಷ್ಟವಾಗದವರಿಗೂ ಧನ್ಯವಾದಗಳು. ವಿಮರ್ಶೆ ಬರಿಬೇಕಾದ್ರೆ ದಯವಿಟ್ಟು ಯಾರೂ ಸಹ ಚಿತ್ರ ಕುರಿತ ಮಾಹಿತಿಯನು ಬಿಟ್ಟುಕೊಡಬೇಡಿ ( ಕಥೆಗೆ ತಿರುವು ಕೊಡುವ ಅಂಶ ಅಥವಾ ಕಥೆಯಲ್ಲಿ ಬರುವ ಬಹುಮುಖ್ಯ ಸನ್ನಿವೇಶದ ಕಾರಣಗಳು ) ಏನು ಅನಿಸಿತೋ ಅದನ್ನೇ ಬರೆಯಿರಿ. ಆದರೆ ಸ್ಪಾಯಿಲರ್ ಇಲ್ಲದೇ ಇರುವ ಹಾಗೆ ಬರೆಯಿರಿ” ಎಂದು ರಕ್ಷಿತ್ ಶೆಟ್ಟಿ ಮನವಿ ಮಾಡಿಕೊಂಡರು.
ಸಪ್ತ ಸಾಗರದಾಚೆ ಎಲ್ಲೋ ಚಿತ್ರವನ್ನು ನಿರ್ಮಾಣ ಪರಂವಾ ಪಿಕ್ಚರ್ಸ್ ಮಾಡಿದೆ. ನಿರ್ದೇಶನ ಹೇಮಂತ್ ಎಂ. ರಾವ್. ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ರಮೇಶ್ ಇಂದಿರಾ, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್ ಮುಂತಾದವರು ನಟಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.